ನವದೆಹಲಿ: ಭಾರತಕ್ಕೆ ಪ್ರಯಾಣಿಸುವ ಕೆನಡಾ ಜನತೆಗೆ ಅಲ್ಲಿನ ಸರ್ಕಾರವು ಪ್ರಯಾಣಿಕ ಸಲಹೆಯನ್ನು ನೀಡಿದ ಒಂದು ದಿನದ ನಂತರ, ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಕೆನಡಾ ದೇಶದಲ್ಲಿರುವ ಭಾರತೀಯರಿಗೆ ಸಲಹೆಯನ್ನು ಬಿಡುಗಡೆ ಮಾಡಿದೆ.
ಉಭಯ ದೇಶಗಳ ನಡುವಣ ಈ ಉಲ್ಬಣವು ರಾಯಭಾರಿಗಳ ಉಚ್ಚಾಟನೆಯನೂ ಕಂಡಿದೆ ಮತ್ತು ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತೀಯ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬ ಕೆನಡಾದ ಆರೋಪಗಳ ನಂತರ ದೇಶಗಳ ನಡುವಿನ ರಾಜತಾಂತ್ರಿಕ ಸಂಘರ್ಷ ತಾರಕಕ್ಕೇರಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರಾದ ಅರಿಂದಮ್ ಬಾಗ್ಚಿ ಅವರು ಸಲಹೆಯನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
ಕೆನಡಾದಲ್ಲಿ ಹೆಚ್ಚುತ್ತಿರುವ ಭಾರತ-ವಿರೋಧಿ ಚಟುವಟಿಕೆಗಳು ಮತ್ತು ರಾಜಕೀಯವಾಗಿ ಮನ್ನಣೆ ಪಡೆದ ದ್ವೇಷದ ಅಪರಾಧಗಳು ಮತ್ತು ಕ್ರಿಮಿನಲ್ ಹಿಂಸಾಚಾರದ ದೃಷ್ಟಿಯಿಂದ, ಅಲ್ಲಿನ ಎಲ್ಲಾ ಭಾರತೀಯರು ಮತ್ತು ಅಲ್ಲಿಗೆ ಪ್ರಯಾಣಿಸಲು ಆಲೋಚಿಸುವವರು ಅತ್ಯಂತ ಜಾಗರೂಕರಾಗಿರಿ ಎಂದು ಸಲಹೆಯನ್ನು ನೀಡಲಾಗಿದೆ.
Advisory for Indian Nationals and Indian Students in Canada:https://t.co/zboZDH83iw pic.twitter.com/7YjzKbZBIK
— Arindam Bagchi (@MEAIndia) September 20, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.