ನವದೆಹಲಿ: ಕೆನಡಾದಲ್ಲಿರುವ ಭಾರತೀಯ ಮಿಷನ್ ‘ಕಾರ್ಯಾಚರಣೆಯ ಕಾರಣಗಳನ್ನು’ ಉಲ್ಲೇಖಿಸಿ ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯನ್ನು ಭಾರತ ನಡೆಸಿದೆ ಎನ್ನುವ ಪ್ರಧಾನಿ ಜಸ್ಟಿನ್ ಟ್ರುಡೊ ಸರ್ಕಾರದ ಆರೋಪಗಳಿಗೆ ಸಂಬಂಧಿಸಿದಂತೆ ಮಹತ್ವದ ಅಂತರರಾಷ್ಟ್ರೀಯ ವಿವಾದದ ನಡುವೆ ಈ ನಿರ್ಧಾರವು ಬಂದಿದೆ.
ಆನ್ಲೈನ್ ವೀಸಾ ಅರ್ಜಿ ಕೇಂದ್ರವಾದ BLS ಇಂಟರ್ನ್ಯಾಷನಲ್ನಿಂದ ಸೂಚನೆಯು ವೀಸಾ ಸೇವೆಗಳನ್ನು ಅಮಾನತುಗೊಳಿಸಿರುವುದನ್ನು ದೃಢಪಡಿಸಿದೆ. ಇದರಿಂದ ಇನ್ನು ಕೆಲ ದಿನಗಳ ಕಾಲ ಕೆನಡಾ ನಾಗರಿಕರು ಭಾರತ ಪ್ರವೇಶಿಸುವಂತಿಲ್ಲ.
“ಭಾರತೀಯ ಮಿಷನ್ನಿಂದ ಪ್ರಮುಖ ಸೂಚನೆ: ಕಾರ್ಯಾಚರಣೆಯ ಕಾರಣಗಳಿಂದಾಗಿ, 21 ಸೆಪ್ಟೆಂಬರ್ 2023 ರಿಂದ ಜಾರಿಗೆ ಬರುವಂತೆ, ಮುಂದಿನ ಸೂಚನೆಯವರೆಗೆ ಭಾರತೀಯ ವೀಸಾ ಸೇವೆಗಳನ್ನು ಅಮಾನತುಗೊಳಿಸಲಾಗಿದೆ. ಹೆಚ್ಚಿನ ನವೀಕರಣಗಳಿಗಾಗಿ ದಯವಿಟ್ಟು BLS ವೆಬ್ಸೈಟ್ ಅನ್ನು ಪರಿಶೀಲಿಸುತ್ತಿರಿ” ಎಂದು BLS ವೆಬ್ಸೈಟ್ ಹೇಳಿದೆ.
ಕಳೆದ ಕೆಲವು ದಿನಗಳಿಂದ ಭಾರತ ಮತ್ತು ಕೆನಡಾದ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣಿಸಿದ್ದು, ಎರಡೂ ದೇಶಗಳಲ್ಲಿ ರಾಯಭಾರಿಗಳನ್ನು ವಜಾ ಮಾಡಲಾಗಿದೆ. ಎರಡೂ ದೇಶಗಳು ತಮ್ಮ ತಮ್ಮ ನಾಗರಿಕರಿಗೆ ಪ್ರಯಾಣ ಸಲಹೆಗಳನ್ನೂ ಬಿಡುಗಡೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.