ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಬಿಜಯಂತ್ ಜಯ್ ಪಾಂಡಾ ಅವರಿಗೆ ಬೆದರಿಕೆ ಕರೆ ಬಂದಿದ್ದು, ಕರೆ ಮಾಡಿದವರು ಒಡಿಶಾ ಸಚಿವ ನಬಾ ದಾಸ್ ಅವರಂತೆ ನಿಮ್ಮನ್ನೂ ಹತ್ಯೆ ಮಾಡುವುದಾಗಿ ಪಾಂಡಾ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ. ಖಲಿಸ್ಥಾನಿ ಅಂಶಗಳು ಬೆದರಿಕೆ ಹಾಕಿರುವ ಬಗ್ಗೆ ಬಲವಾದ ಶಂಕೆ ವ್ಯಕ್ತವಾಗಿದೆ.
ಬಿಜಯನತ್ ಜಯ್ ಪಾಂಡಾ ಅವರ ಸಹಾಯಕ ಗುರುವಾರ ಕರೆ ಸ್ವೀಕರಿಸಿದಾಗ ಕರೆ ಮಾಡಿದರವರು ಪಾಂಡಾ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಪಾಂಡಾ ಅವರ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ಕರೆ ಮಾಡಿದವರು “ನಬಾ ದಾಸ್ಗೆ ಮಾಡಿದಂತೆಯೇ ಜಯ್ ಪಾಂಡಾಗೂ ಮಾಡಲಾಗುವುದು” ಎಂದು ಬೆದರಿಕೆ ಹಾಕಿದ್ದಾರೆ. ಈ ವರ್ಷದ ಜನವರಿಯಲ್ಲಿ ಒಡಿಶಾ ಸಚಿವ ನಬಾ ದಾಸ್ ಅವರನ್ನು ಹಗಲು ಹೊತ್ತಿನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಗುಂಡಿಕ್ಕಿ ಕೊಂದಿದ್ದರು.
“ಇದು ಬಾಲಾಕರು ಮಾಡಿದ ತಮಾಷೆಯ ಕರೆಯೂ ಆಗಿರಬಹುದು, ಆದರೆ ಬೆದರಿಕೆಯನ್ನು ಲಘುವಾಗಿ ತೆಗೆದುಕೊಳ್ಳಬಾರದು” ಎಂದು ಪ್ರಕಟಣೆ ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಾಲ್ಕು ಬಾರಿ ಸಂಸದರಾಗಿರುವ ಅವರು ತನಿಖೆಗಾಗಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.