ನವದೆಹಲಿ: ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಶಿರೋಮಣಿ ಅಕಾಲಿ ದಳ (ಎಸ್ಎಡಿ) ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರು ಇಂದು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು ಮತ್ತು ಉಭಯ ದೇಶಗಳ ನಡುವಿನ ವಿವಾದಗಳಿಗೆ ಶೀಘ್ರ ಪರಿಹಾರ ದೊರೆಯುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು.
ಉಭಯ ದೇಶಗಳ ನಡುವಿನ ಪ್ರಸ್ತುತ ಪರಿಸ್ಥಿತಿ ಕೆನಡಾದಲ್ಲಿ ನೆಲೆಸಿರುವ ಭಾರತೀಯ ಮೂಲದ ಜನರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಸುಖಬೀರ್ ಸಿಂಗ್ ಬಾದಲ್ ಕಳವಳ ವ್ಯಕ್ತಪಡಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಬಾದಲ್, “ಭಾರತ ಮತ್ತು ಕೆನಡಾ ನಡುವಿನ ಪ್ರಸ್ತುತ ಪರಿಸ್ಥಿತಿಯು ಈಗ ಕೆನಡಾದಲ್ಲಿ ವಾಸಿಸುವ ಭಾರತೀಯ ಮೂಲದ ಜನರ ಮೇಲೆ ಪರಿಣಾಮ ಬೀರುತ್ತಿದೆ. ಜನರಲ್ಲಿ ಭೀತಿಯಂತಹ ಪರಿಸ್ಥಿತಿ ಬೆಳೆಯುತ್ತಿದೆ, ಭಾರತ ಸರ್ಕಾರ ಶೀಘ್ರದಲ್ಲೇ ಪರಿಹಾರವನ್ನು ಕಂಡುಹಿಡಿಯಬೇಕು. ನಾನು ಇದನ್ನು ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದೇನೆ” ಎಂದರು.
“ಭಾರತದ ಸ್ವಾತಂತ್ರ್ಯಕ್ಕಾಗಿ ಹೆಚ್ಚು ತ್ಯಾಗ ಮಾಡಿದ ಸಿಖ್ಖರು ಮತ್ತು ಪಂಜಾಬಿಗಳಿಗೆ ಸಹಾಯ ಮಾಡಲು ನಾನು ಭಾರತ ಸರ್ಕಾರವನ್ನು ವಿನಂತಿಸುತ್ತಿದ್ದೇನೆ. ಇದು ರಾಷ್ಟ್ರೀಯತಾವಾದಿ ಸಮುದಾಯವಾಗಿದ್ದು ಅದನ್ನು ನಕಾರಾತ್ಮಕ ಮನೋಭಾವದಿಂದ ಗ್ರಹಿಸಲಾಗುತ್ತಿದೆ” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.