ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸ್ನ ಉಪ ಅಧೀಕ್ಷಕರನ್ನು ಭಯೋತ್ಪಾದಕ ಕಾರ್ಯಕರ್ತರೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಬಂಧಿಸಲಾಗಿದೆ. ಬಂಧನದಿಂದ ತಪ್ಪಿಸಿಕೊಳ್ಳಲು ಭಯೋತ್ಪಾದಕನಿಗೆ ಸಹಾಯ ಮಾಡಿದ ಮತ್ತು ಆತನನ್ನು ತನಿಖೆ ನಡೆಸುತ್ತಿರುವ ಪೋಲೀಸ್ ಅಧಿಕಾರಿಯನ್ನು ಸಿಲುಕಿಸಲು ಪ್ರಯತ್ನಿಸಿದ ಆರೋಪದ ಮೇರೆಗೆ ಪೊಲೀಸ್ ಅಧಿಕಾರಿ ಶೇಖ್ ಆದಿಲ್ ಮುಷ್ತಾಕ್ ಅನ್ನು ಬಂಧನಕ್ಕೆ ಒಳಪಡಿಸಲಾಗಿದೆ.
ಭ್ರಷ್ಟಾಚಾರ ಸೇರಿದಂತೆ ಹಲವು ಆರೋಪಗಳ ಮೇಲೆ ಅಧಿಕಾರಿಯನ್ನು ಬಂಧಿಸಲಾಗಿದೆ. ಅವರನ್ನು ಶ್ರೀನಗರದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಜುಲೈನಲ್ಲಿ ಬಂಧನಕ್ಕೊಳಗಾದ ಭಯೋತ್ಪಾದಕ ಆರೋಪಿಗಳ ಫೋನ್ ಡಿಟೇಲ್ಸ್ ಅವರು ಆದಿಲ್ ಮುಷ್ತಾಕ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ. ಕಾನೂನನ್ನು ತಪ್ಪಿಸುವುದು ಹೇಗೆ ಎಂದು ಅವರು ಅವರಿಗೆ ಮಾರ್ಗದರ್ಶನ ನೀಡಿದರು.
ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಆದಿಲ್ ಮುಷ್ತಾಕ್ ಟೆಲಿಗ್ರಾಂ ಆ್ಯಪ್ನಲ್ಲಿ ಆರೋಪಿಗಳೊಂದಿಗೆ ಮಾತನಾಡುತ್ತಿದ್ದರು. “ಭಯೋತ್ಪಾದಕ ಆರೋಪಿಗಳು ಮತ್ತು ಉಪ ಅಧೀಕ್ಷಕರ ನಡುವೆ ಕನಿಷ್ಠ 40 ಕರೆಗಳು ವಿನಿಮವಾಗಿವೆ. ಅವರು ಬಂಧನದಿಂದ ತಪ್ಪಿಸಿಕೊಳ್ಳುವುದು ಮತ್ತು ಕಾನೂನು ನೆರವು ಪಡೆಯುವುದು ಹೇಗೆ ಎಂದು ಉಗ್ರರಿಗೆ ಮಾರ್ಗದರ್ಶನ ನೀಡುತ್ತಿದ್ದರು” ಎಂದು ತನಿಖೆಯ ಮೇಲ್ವಿಚಾರಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಭಯೋತ್ಪಾದಕ ಆರೋಪಿಗಳಿಗೆ ಅವರು ಹೇಗೆ ಸಹಾಯ ಮಾಡುತ್ತಿದ್ದರು ಎಂಬುದಕ್ಕೆ ಸಾಕ್ಷಿಗಳಿವೆ. ಭಯೋತ್ಪಾದಕ ನಿಧಿಯ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿಯನ್ನು ಸಹ ಆದಿಲ್ ಸಿಲುಕಿಸಲು ಪ್ರಯತ್ನಿಸಿದ್ದರು” ಎಂದು ಅಧಿಕಾರಿ ಹೇಳಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಭಯೋತ್ಪಾದಕರೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಉನ್ನತ ಅಧಿಕಾರಿಯೊಬ್ಬರನ್ನು ಬಂಧಿಸಿರುವುದು ಇದು ಎರಡನೇ ಪ್ರಕರಣವಾಗಿದೆ. 2020 ರಲ್ಲಿ, ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರಿಗೆ ಆಶ್ರಯ ನೀಡಿ ದೆಹಲಿಗೆ ಸಾಗಿಸಿದ ಆರೋಪದ ಮೇಲೆ ಪೊಲೀಸ್ ಉಪ ಅಧೀಕ್ಷಕರಾಗಿದ್ದ ದೇವಿಂದರ್ ಸಿಂಗ್ ಅವರನ್ನು ಬಂಧಿಸಲಾಯಿತು. ಭಯೋತ್ಪಾದನೆ ಆರೋಪ ಎದುರಿಸುತ್ತಿರುವ ಸಿಂಗ್ ಜೈಲಿನಲ್ಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.