ನವದೆಹಲಿ: ಆಧಾರ್ ಕುರಿತು ಅನುಮಾನ ವ್ಯಕ್ತಪಡಿಸಿ ಮೂಡೀಸ್ ಬಿಡುಗಡೆ ಮಾಡಿರುವ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.
ಆಧಾರ್ ಕಾರ್ಯದಕ್ಷತೆ ಪ್ರಶ್ನಿಸಿ ಜಾಗತಿಕ ಕ್ರೆಡಿಟ್ ರೇಟಿಂಗ್ ಸಂಸ್ಥೆ ಮೂಡೀಸ್ ಬಿಡುಗಡೆಗೊಳಿಸಿದ್ದ ವರದಿಯನ್ನು ತಿರಸ್ಕರಿಸಿರುವ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಈ ವರದಿಗೆ ಯಾವುದೇ ಸಾಕ್ಷಿ ಅಥವಾ ಆಧಾರಗಳಿಲ್ಲ ಎಂದಿದೆ.
ಮೂಡೀಸ್ ತನ್ನ ವರದಿಯಲ್ಲಿ ಆಧಾರ್ ಸುರಕ್ಷತೆ ಹಾಗೂ ಗೌಪ್ಯತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಅಲ್ಲದೆ, ಆಧಾರ್ ಅನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಹಾಗೆಯೇ ಭಾರತ ಸರ್ಕಾರ ಕೂಡ ಆಧಾರ್ ಬಳಕೆದಾರರ ಮಾಹಿತಿಗಳನ್ನು ಸಂರಕ್ಷಿಸಲು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ಸಚಿವಾಲಯ, ಈ ವರದಿಗೆ ಯಾವುದೇ ಸಾಕ್ಷಿ ಅಥವಾ ಆಧಾರಗಳಿಲ್ಲ ಎಂದಿದೆ. ಮೂಡೀಸ್ ಸಂಸ್ಥೆ ಸೆಪ್ಟೆಂಬರ್ 21ರಂದು ಬಿಡುಗಡೆಗೊಳಿಸಿರುವ ವರದಿಯಲ್ಲಿ ಮಂಡಿಸಿರುವ ಅಭಿಪ್ರಾಯಗಳು ನಿರಾಧಾರವಾಗಿದೆ. ಕೂಲಿ ಕಾರ್ಮಿಕರಿಗೆ ಸಮರ್ಪಕ ಸೇವೆ ನೀಡುವಲ್ಲಿ ಆಧಾರ್ ವಿಫಲವಾಗಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಯುಐಡಿಎಐ ತಿಳಿಸಿದೆ. ಕಳೆದ ಒಂದು ದಶಕದಲ್ಲಿ ಶತಕೋಟಿಗೂ ಅಧಿಕ ಭಾರತೀಯರು ಸಹಸ್ರಾರು ಕೋಟಿಗಿಂತ ಹೆಚ್ಚು ಬಾರಿ ಆಧಾರ್ ಬಳಸುವ ಮೂಲಕ ಅದರ ಮೇಲಿನ ತಮ್ಮ ವಿಶ್ವಾಸವನ್ನು ತೋರ್ಪಡಿಸಿದ್ದಾರೆ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.