ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.30ರಂದು ನವದೆಹಲಿಯಲ್ಲಿ ಮಹತ್ವಾಕಾಂಕ್ಷೆಯ ಬ್ಲಾಕ್ಗಳಿಗಾಗಿ ಒಂದು ವಾರದ ವಿಶಿಷ್ಟ ಕಾರ್ಯಕ್ರಮವನ್ನು ಪ್ರಾರಂಭಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸಂಕಲ್ಪ ಸಪ್ತಾಹ ಎಂದು ಹೆಸರಿಡಲಾಗಿದೆ.
ನಾಗರಿಕರ ಜೀವನದ ಗುಣಮಟ್ಟವನ್ನು ಹೆಚ್ಚಿಸಲು ಬ್ಲಾಕ್ ಮಟ್ಟದಲ್ಲಿ ಆಡಳಿತವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಮಹತ್ವಾಕಾಂಕ್ಷೆಯ ಬ್ಲಾಕ್ಗಳ ಉಪಕ್ರಮದ ಪರಿಣಾಮಕಾರಿ ಅನುಷ್ಠಾನದ ಉದ್ದೇಶವನ್ನು ಈ ವಿಶಿಷ್ಟ ಕಾರ್ಯಕ್ರಮ ಹೊಂದಿದೆ.
ರಾಷ್ಟ್ರ ರಾಜಧಾನಿಯ ಭಾರತ ಮಂಟಪದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ದೇಶಾದ್ಯಂತ ಸುಮಾರು ಮೂರು ಸಾವಿರ ಪಂಚಾಯತ್ ಮತ್ತು ಬ್ಲಾಕ್ ಮಟ್ಟದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ಇದರ ಜೊತೆಗೆ ಬ್ಲಾಕ್ ಮತ್ತು ಪಂಚಾಯತ್ ಮಟ್ಟದ ಪದಾಧಿಕಾರಿಗಳು ಮತ್ತು ರೈತರು ಸೇರಿದಂತೆ ಸುಮಾರು ಎರಡು ಲಕ್ಷ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮುಂದಿನ ತಿಂಗಳು 3 ರಿಂದ 9 ರವರೆಗೆ ದೇಶದ 329 ಜಿಲ್ಲೆಗಳ 500 ಮಹತ್ವಾಕಾಂಕ್ಷೆಯ ಬ್ಲಾಕ್ಗಳಲ್ಲಿ ಸಂಕಲ್ಪ ಸಪ್ತಾಹವನ್ನು ಆಚರಿಸಲಾಗುತ್ತದೆ. ಅವಧಿಯಲ್ಲಿ ಪ್ರತಿ ದಿನವು ನಿರ್ದಿಷ್ಟ ಅಭಿವೃದ್ಧಿ ಥೀಮ್ ಹೊಂದಿರುತ್ತದೆ, ಅದರ ಮೇಲೆ ಎಲ್ಲಾ ಮಹತ್ವಾಕಾಂಕ್ಷೆಯ ಬ್ಲಾಕ್ಗಳು ಕಾರ್ಯನಿರ್ವಹಿಸುತ್ತವೆ. ಮೊದಲ ಆರು ದಿನಗಳ ಥೀಮ್ಗಳಲ್ಲಿ ಸಂಪೂರ್ಣ ಸ್ವಾಸ್ಥ್ಯ, ಸುಪೋಷಿತ್ ಪರಿವಾರ, ಸ್ವಚ್ಛತಾ, ಕೃಷಿ, ಶಿಕ್ಷಾ ಮತ್ತು ಸಮೃದ್ಧಿ ದಿವಸ್ ಸೇರಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.