ವಿಶ್ವಸಂಸ್ಥೆ: ಯುಎನ್ಎಚ್ಆರ್ಸಿಯ 54 ನೇ ಅಧಿವೇಶನದಲ್ಲಿ ಕಾಶ್ಮೀರ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪಾಕಿಸ್ತಾನವು ಕಾನೂನುಬಾಹಿರವಾಗಿ ಪಿಒಕೆ (ಪಾಕಿಸ್ತಾನ ಆಕ್ರಮಿತ ಕಾಶ್ಮೀರ) ವಶಪಡಿಸಿಕೊಂಡಿದೆ ಮತ್ತು ಈ ಪ್ರದೇಶದಲ್ಲಿ ದೌರ್ಜನ್ಯ ನಡೆಸುತ್ತಿದೆ ಎಂದು ಟೀಕಿಸಿದರು.
ಯುರೋಪಿಯನ್ ಫೌಂಡೇಶನ್ ಫಾರ್ ಸೌತ್ ಏಷ್ಯನ್ ಸ್ಟಡೀಸ್ನ ನಿರ್ದೇಶಕ ಜುನೈದ್ ಖಾನ್, ಇಸ್ಲಾಮಾಬಾದ್ನ ದಮನಕಾರಿ ರಾಜಕೀಯದಿಂದಾಗಿ ಪಿಒಕೆಯಿಂದ ಜನರು ಇತರ ರಾಷ್ಟ್ರಗಳಿಗೆ ವಲಸೆ ಹೋಗಬೇಕಾಯಿತು ಎಂದು ಹೇಳಿದ್ದಾರೆ.
ಪಿಒಕೆ ಪ್ರದೇಶದಿಂದ ಪಾಕಿಸ್ತಾನ ನಿರ್ಗಮಿಸುವಂತೆ ಕರೆ ನೀಡಿದ ನಂತರ ಈ ಪ್ರತಿಭಟನೆ ನಡೆದಿದೆ.
ಕೆಲವು ದಿನಗಳ ಹಿಂದೆ, ಯುನೈಟೆಡ್ ಕಾಶ್ಮೀರ ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಕಾರ್ಯಕರ್ತರು ಸ್ವಿಟ್ಜರ್ಲೆಂಡ್ನ ಜಿನೀವಾದಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಹೊರಗೆ ಪ್ರತಿಭಟನೆ ನಡೆಸಿದರು ಮತ್ತು ಪಿಒಕೆ ಜನರು ಗುಲಾಮರಾಗಿ ಬದುಕುತ್ತಿದ್ದಾರೆ, ಅವರಿಗೆ ಪಾಕಿಸ್ಥಾನದಿಂದ ಬಿಡುಗಡೆ ಬೇಕು ಎಂದು ಆಗ್ರಹಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಯುಕೆಪಿಎನ್ಪಿ ವಕ್ತಾರರು, ಪಿಒಕೆಯಲ್ಲಿ ಜನರು ಕಳೆದ ಆರು ತಿಂಗಳಿನಿಂದ ಭಯೋತ್ಪಾದನೆ ಮತ್ತು ಹಣದುಬ್ಬರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
“ಯುನೈಟೆಡ್ ಕಾಶ್ಮೀರ ನ್ಯಾಷನಲ್ ಪೀಪಲ್ಸ್ ಪಾರ್ಟಿಯು ಯುಎನ್ಎಚ್ಆರ್ಸಿಯ 54 ನೇ ಅಧಿವೇಶನದಲ್ಲಿ ವಿಶ್ವಸಂಸ್ಥೆಯ ಮುಂದೆ ಈ ಪ್ರತಿಭಟನೆಯನ್ನು ಆಯೋಜಿಸಿದೆ, ನಾವು ಪಿಒಕೆ ಮತ್ತು ಗಿಲ್ಗಿಟ್-ಬಾಲ್ಟಿಸ್ತಾನ್ನಲ್ಲಿ ಎದುರಿಸುತ್ತಿರುವ ಸಮಸ್ಯೆಯನ್ನು ಎತ್ತಿ ತೋರಿಸುತ್ತೇವೆ. ವಿದ್ಯುತ್ ಬಿಲ್ಗಳ ಮೇಲಿನ ಭಾರಿ ಶುಲ್ಕದ ವಿರುದ್ಧ ಜನರು ಬೀದಿಗಿಳಿದಿದ್ದಾರೆ, ಹಣದುಬ್ಬರ ಮತ್ತು ಭಯೋತ್ಪಾದನೆ ವಿರುದ್ಧ ಪ್ರತಿಭಟಿಸುತ್ತಿದ್ದಾರೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.