ನವದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ಐತಿಹಾಸಿಕ ಅಂಗೀಕಾರ ಪಡೆದ ಮಹಿಳಾ ಮೀಸಲಾತಿ ಮಸೂದೆಯು ಸೆಪ್ಟೆಂಬರ್ 29 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅಂಕಿತ ಪಡೆದುಕೊಂಡಿದೆ. ಮುರ್ಮು ಒಪ್ಪಿಗೆಯೊಂದಿಗೆ ಮಸೂದೆ ಈಗ ಕಾನೂನಾಗಿ ಪರಿವರ್ತನೆಗೊಂಡಿದೆ.
ಭಾರತ ಸರ್ಕಾರವು ಗೆಜೆಟ್ ಅಧಿಸೂಚನೆಯಲ್ಲಿ, ರಾಷ್ಟ್ರಪತಿಗಳ ಅನುಮೋದನೆಯ ನಂತರ ಮಸೂದೆಯು ಕಾಯಿದೆಯಾಗಿ ಮಾರ್ಪಟ್ಟಿದೆ ಎಂದು ಹೇಳಿದೆ. “ಕೇಂದ್ರ ಸರ್ಕಾರವು ಅಧಿಕೃತ ಗೆಜೆಟ್ನಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸುವ ದಿನಾಂಕದಂದು ಕಾನೂನು ಜಾರಿಗೆ ಬರುತ್ತದೆ” ಎಂದು ಅದು ಹೇಳಿದೆ.
ಅಧಿಕೃತವಾಗಿ ನಾರಿ ಶಕ್ತಿ ವಂದನ್ ಅಧಿನಿಯಮ್ ಎಂದು ಕರೆಯಲ್ಪಡುವ ಈ ಕಾನೂನು ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ಅಸೆಂಬ್ಲಿಗಳಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲು ಪ್ರಸ್ತಾಪಿಸುತ್ತದೆ. 454 ಸಂಸದರು ಅದರ ಪರವಾಗಿ ಮತ್ತು 2 ಅದರ ವಿರುದ್ಧ ಮತ ಚಲಾಯಿಸುವ ಮೂಲಕ ಲೋಕಸಭೆಯಲ್ಲಿ ಸೆಪ್ಟೆಂಬರ್ 20 ರಂದು ಮಸೂದೆ ಅನುಮೋದನೆ ಪಡೆದುಕೊಂಡಿತು. ಇತರ ಹಿಂದುಳಿದ ವರ್ಗ (OBC) ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಮಹಿಳೆಯರಿಗೆ ಉಪ-ಕೋಟಾವನ್ನು ಮಸೂದೆಯಲ್ಲಿ ಸೇರಿಸುವಂತೆಯೂ ಒತ್ತಾಯಗಳು ಕೇಳಿಬರುತ್ತಿವೆ.
ಸೆಪ್ಟೆಂಬರ್ 21 ರಂದು ರಾಜ್ಯಸಭೆಯಲ್ಲಿ 214 ಸಂಸದರು ಅದರ ಪರವಾಗಿ ಮತ ಚಲಾಯಿಸುವ ಮೂಲಕ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.