ನವದೆಹಲಿ: ಕಳೆದ ತಿಂಗಳು ರಾಷ್ಟ್ರೀಯ ಮಟ್ಟದಲ್ಲಿ ಆರಂಭಿಸಲಾದ ಆಯುಷ್ಮಾನ್ ಭವ ಅಭಿಯಾನದ ಅಡಿಯಲ್ಲಿ ಸುಮಾರು 64,000 ಜನರು ತಮ್ಮ ಅಂಗಾಂಗಗಳನ್ನು ದಾನ ಮಾಡುವ ಪ್ರತಿಜ್ಞೆಯನ್ನು ತೆಗೆದುಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಈ ಅಭಿಯಾನವನ್ನು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ‘ಸೇವಾ ಪಖ್ವಾಡಾ’ ಸಮಯದಲ್ಲಿ ಜಾರಿಗೊಳಿಸಲಾಗಿದೆ. ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಕೂಡ ಅಂಗಾಂಗ ದಾನಕ್ಕೆ ನೋಂದಾಯಿಸಿಕೊಂಡಿದ್ದಾರೆ.
ಆಯುಷ್ಮಾನ್ ಭವ ಅಭಿಯಾನವು ಅತ್ಯಂತ ಯಶಸ್ವಿಯಾಗಿದೆ ಮತ್ತು ಜನರಿಂದ ಅಗಾಧವಾದ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ ಎಂದು ಡಾ.ಮಾಂಡವಿಯಾ ಇಂದು ಹೇಳಿದ್ದಾರೆ. ಸುಮಾರು 2.70ಲಕ್ಷ ಆರೋಗ್ಯ ಮೇಳವನ್ನು ಆಯೋಜಿಸಲಾಗಿದ್ದು, 1.61 ಕೋಟಿ ಜನರು ಭೇಟಿ ನೀಡಿ ಪ್ರಯೋಜನ ಪಡೆದರು ಎಂದು ಮಾಹಿತಿ ನೀಡಿದ್ದಾರೆ.
ಅಭಿಯಾನದಡಿಯಲ್ಲಿ ಸುಮಾರು 64 ಲಕ್ಷ ಆಯುಷ್ಮಾನ್ ಕಾರ್ಡ್ಗಳನ್ನು ನೀಡಲಾಗಿದೆ ಮತ್ತು ಒಂದು ಕೋಟಿಗೂ ಹೆಚ್ಚು ABHA ಐಡಿ ಕಾರ್ಡ್ಗಳನ್ನು ಉತ್ಪಾದಿಸಲಾಗಿದೆ. ಇದರ ಅಡಿಯಲ್ಲಿ 14,157 ರಕ್ತದಾನ ಶಿಬಿರಗಳನ್ನು ನಡೆಸಲಾಗಿದ್ದು, ಸುಮಾರು ಎರಡು ಲಕ್ಷದ 28,000 ಯೂನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ ಎಂದು ಡಾ.ಮಾಂಡವಿಯಾ ಹೇಳಿದರು.
2,00,000 से अधिक ब्लड यूनिट का महादान! 🙏🩸
प्रधानमंत्री @NarendraModi जी के जन्मदिवस पर 17 सितंबर से शुरू हुए सेवा पखवाड़ा में अब तक 2 लाख से अधिक रक्तदान किए जा चुके हैं। #AyushmanBhav pic.twitter.com/TQhU7QJd7x
— Dr Mansukh Mandaviya (@mansukhmandviya) October 2, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.