ನವದೆಹಲಿ: ಅಕ್ಟೋಬರ್ 1 ರಂದು “ಏಕ್ ತಾರೀಖ್ ಏಕ್ ಘಂಟಾ ಏಕ್ ಸಾಥ್” ಉಪಕ್ರಮವನ್ನು ಕೇಂದ್ರ ಸರ್ಕಾರ ಆರಂಭಿಸಿತ್ತು. ಇದರ ಭಾಗವಾಗಿ ಸುಮಾರು 8.75 ಕೋಟಿ ಜನರು ದೇಶಾದ್ಯಂತ 9 ಲಕ್ಷ ತಾಣಗಳಲ್ಲಿ ಮೆಗಾ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದಾರೆ ಮತ್ತು ಶ್ರಮದಾನವನ್ನು ಮಾಡಿದ್ದಾರೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಅಭಿಯಾನದಡಿ ರಸ್ತೆಗಳು, ಹೆದ್ದಾರಿಗಳು ಮತ್ತು ಟೋಲ್ ಪ್ಲಾಜಾಗಳು ರೈಲ್ವೆ ಹಳಿಗಳು, ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರಗಳು, ಪ್ರವಾಸಿ ಸ್ಥಳಗಳು, ವಸತಿ ಕಾಲೋನಿಗಳು, ಜಲಮೂಲಗಳು ಮತ್ತು ಪೂಜಾ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ಕೈಗೊಳ್ಳಲಾಯಿತು. ಜನರ ಈ ಸಾಮೂಹಿಕ ಕ್ರಿಯೆಯು ಎಲ್ಲಾ ತಾಣಗಳಲ್ಲಿ ಸ್ವಚ್ಛತೆಗೆ ಕಾರಣವಾಯಿತು ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಕೇಂದ್ರ ಸರ್ಕಾರದ ಸಚಿವಾಲಯಗಳ ಅಧೀನದಲ್ಲಿರುವ ವಿವಿಧ ಸಂಸ್ಥೆಗಳು ವಿಶಿಷ್ಟ ಚಟುವಟಿಕೆಗಳೊಂದಿಗೆ ಅಭಿಯಾನದಲ್ಲಿ ಭಾಗಿಯಾದವು ಮತ್ತು ಕೇಂದ್ರ ಮಂತ್ರಿಗಳು ವಿವಿಧ ತಾಣಗಳಲ್ಲಿ ಶ್ರಮದಾನದಲ್ಲಿ ಪಾಲ್ಗೊಂಡರು.
ಸ್ವಚ್ಛ ಭಾರತ್ ಮಿಷನ್ನ 9 ವರ್ಷಗಳಲ್ಲಿ, ಜನರು ಹಲವಾರು ಸಂದರ್ಭಗಳಲ್ಲಿ ಒಗ್ಗೂಡಿ ಸ್ವಚ್ಛತೆಯ ಕಾರ್ಯದಲ್ಲಿ ಭಾಗಿಯಾಗುವ ಮೂಲಕ ಸಾಮೂಹಿಕ ಪ್ರಯತ್ನಗಳ ಶಕ್ತಿಯನ್ನು ಎತ್ತಿ ತೋರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.