ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ಫಲಾನುಭವಿಗಳಿಗೆ ಸಬ್ಸಿಡಿಯನ್ನು 300 ರೂ.ಗೆ ಹೆಚ್ಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬುಧವಾರ ಘೋಷಿಸಿದೆ.
“ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸರ್ಕಾರವು ಎಲ್ಪಿಜಿ ಸಿಲಿಂಡರ್ಗೆ 200 ರಿಂದ 300 ರೂ.ಗೆ ಸಬ್ಸಿಡಿ ಮೊತ್ತವನ್ನು ಹೆಚ್ಚಿಸಿದೆ” ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಂಪುಟ ನಿರ್ಧಾರಗಳ ಬಗ್ಗೆ ಪ್ರತಿಕಾಗೋಷ್ಠಿ ನಡೆಸಿದ ಸಂದರ್ಭದಲ್ಲಿ ಇಂದು ತಿಳಿಸಿದ್ದಾರೆ.
ಕೇಂದ್ರ ಸಚಿವ ಸಂಪುಟವು ಈ ವರ್ಷದ ಆಗಸ್ಟ್ನಲ್ಲಿ ಪ್ರತಿ ಗೃಹೋಪಯೋಗಿ ಎಲ್ಪಿಜಿ ಸಿಲಿಂಡರ್ಗೆ ರೂ 200 ಸಬ್ಸಿಡಿಯನ್ನು ಅನುಮೋದಿಸಿತ್ತು ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಅಸ್ತಿತ್ವದಲ್ಲಿರುವ ಸಬ್ಸಿಡಿಯನ್ನು ರೂ 200 ರಷ್ಟು ಹೆಚ್ಚಿಸಿತ್ತು. ಇದೀಗ ಅದನ್ನು 300 ರೂಪಾಯಿಗಳಿಗೆ ವೃದ್ಧಿಸಲಾಗಿದೆ.
PMUY ಅನ್ನು ಯಶಸ್ವಿ ಸಮಾಜ ಕಲ್ಯಾಣ ಯೋಜನೆ ಎಂದು ವ್ಯಾಪಕವಾಗಿ ಪ್ರಶಂಸಿಸಲಾಗಿದೆ, ಇದು ದೇಶದಲ್ಲಿ LPG ಬಳಕೆಯನ್ನು 2016 ರಲ್ಲಿ ಇದ್ದ 62% ರಿಂದ ಈಗ ಪೂರ್ಣ ಮಟ್ಟಕ್ಕೆ ಹೆಚ್ಚಿಸಲು ಪ್ರಮುಖ ಕೊಡುಗೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.