ನವದೆಹಲಿ: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ನಡೆಯುತ್ತಿರುವ ಸಂಘರ್ಷವು ಭಾರತಕ್ಕೆ ಇಂಧನ ಸಮಸ್ಯೆಯನ್ನು ಸೃಷ್ಟಿಸುವುದಿಲ್ಲ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಹೇಳಿದ್ದಾರೆ. ಅಲ್ಲದೇ, ಈ ರೀತಿಯ ಸನ್ನಿವೇಶಗಳು ದೇಶಕ್ಕೆ ಶುದ್ಧ ಇಂಧನ ಬಳಕೆಯನ್ನು ಆಯ್ಕೆ ಮಾಡಲು ಪ್ರೋತ್ಸಾಹಿಸುತ್ತವೆ ಎಂದು ಸಚಿವರು ಅಭಿಪ್ರಾಯಿಸಿದ್ದಾರೆ.
“ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಸಂಘರ್ಷ ನಡೆಯುತ್ತಿರುವ ಸ್ಥಳವು ಅನೇಕ ವಿಷಯಗಳಲ್ಲಿ ಜಾಗತಿಕ ಶಕ್ತಿಯ ಕೇಂದ್ರವಾಗಿದೆ ಎಂದು ನಾವು ಸಂಪೂರ್ಣವಾಗಿ ಅರಿತುಕೊಂಡಿದ್ದೇವೆ. ನಾವು ಅದನ್ನು ಬಹಳ ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ. ನಾವು ಮುಂದೆ ಸಾಗುತ್ತಾ ಎಲ್ಲವನ್ನೂ ಸರಿದೂಗಿಸುತ್ತೇವೆ. ಯಾವುದೇ ಸಮಸ್ಯೆ ಇಲ್ಲ. ಆದರೆ ನಾನು ಕೇವಲ ಈ ರೀತಿಯ ಅನಿಶ್ಚಿತತೆಗಳು ಸುಸ್ಥಿರ ಮತ್ತು ಶುದ್ಧ ಇಂಧನ ಬಳಕೆಗೆ ಪರಿವರ್ತನೆಗೊಳ್ಳಲು ಜನರನ್ನು ಪ್ರೋತ್ಸಾಹಿಸುತ್ತದೆ ಎಂದು ಮಾತ್ರ ಹೇಳಬಲ್ಲೆ” ಎಂದು ಸಚಿವರು ಹೇಳಿದರು.
ಅಕ್ಟೋಬರ್ 9 ರಂದು ನಡೆದ ಎನರ್ಜಿ ಟೆಕ್ನಾಲಜಿ ಮೀಟ್ನಲ್ಲಿ ಮಾತನಾಡಿದ ಪುರಿ, ಭಾರತವು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಉಲ್ಲೇಖಿಸಿದ್ದಾರೆ. ದೇಶವು ಪರಿಸ್ಥಿತಿಯನ್ನು ಪ್ರಬುದ್ಧತೆಯಿಂದ ನಿಭಾಯಿಸುತ್ತದೆ ಎಂದು ಅವರು ಹೇಳಿದರು.
ದೆಹಲಿಯಲ್ಲಿ 26ನೇ ಎನರ್ಜಿ ಟೆಕ್ನಾಲಜಿ ಮೀಟ್ ಅನ್ನು ಉದ್ಘಾಟಿಸಿದ ಮಾತನಾಡಿದ ಪುರಿ, ಸರ್ಕಾರವು ಇದನ್ನು ಬಹಳ ಎಚ್ಚರಿಕೆಯಿಂದ ಗಮನಿಸುತ್ತಿದೆ. ಈ ಸಮಸ್ಯೆಯ ಮೂಲಕ ದೇಶವು ತನ್ನ ಮಾರ್ಗವನ್ನು ನ್ಯಾವಿಗೇಟ್ ಮಾಡುತ್ತದೆ ಎಂದು ಅವರು ಹೇಳಿದರು. ಭಾರತವು ಇಂಧನ ಪರಿವರ್ತನೆಯತ್ತ ಸಾಗುತ್ತಿದೆ ಎಂದು ಸಚಿವರು ಹೇಳಿದರು. ಭಾರತದಲ್ಲಿ ಶಕ್ತಿಯ ಪರಿವರ್ತನೆಯು ಮೊದಲು ಪಳೆಯುಳಿಕೆ-ಆಧಾರಿತ ಇಂಧನಗಳಿಂದ ಶುದ್ಧ ಇಂಧನಗಳಿಗೆ ಮತ್ತು ಮತ್ತಷ್ಟು ನವೀಕರಿಸಬಹುದಾದೆಡೆಗೆ ಇರುತ್ತದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.