ನವದೆಹಲಿ: ಯುವ ಅಭಿವೃದ್ಧಿ ಮತ್ತು ಯುವ ನೇತೃತ್ವದ ಅಭಿವೃದ್ಧಿಗಾಗಿ ತಂತ್ರಜ್ಞಾನದಿಂದ ಚಾಲಿತವಾದ ಕಾರ್ಯವಿಧಾನವಾಗಿ ಕಾರ್ಯನಿರ್ವಹಿಸಲು ಸ್ವಾಯತ್ತ ಸಂಸ್ಥೆ ‘ಮೇರಾ ಯುವ ಭಾರತ್’ (MY Bharat) ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಯುವಜನರಿಗೆ ಅವರ ಆಕಾಂಕ್ಷೆಗಳನ್ನು ಸಾಕಾರಗೊಳಿಸಲು ಮತ್ತು ಸರ್ಕಾರದ ಸಂಪೂರ್ಣ ಶ್ರೇಣಿಯಲ್ಲಿ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಈ ಸಂಸ್ಥೆ ಸಮಾನ ಪ್ರವೇಶವನ್ನು ಒದಗಿಸುತ್ತದೆ.
ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರಗಳ ಕುರಿತು ಸುದ್ದಿಗಾರರಿಗೆ ವಿವರಿಸಿದ ಠಾಕೂರ್, ‘ಮೇರಾ ಯುವ ಭಾರತ್’ ನ ಪ್ರಾಥಮಿಕ ಉದ್ದೇಶವು ಅದನ್ನು “ಯುವ ಅಭಿವೃದ್ಧಿಗಾಗಿ ಸಂಪೂರ್ಣ ಸರ್ಕಾರಿ ವೇದಿಕೆಯನ್ನಾಗಿ ಮಾಡುವುದು” ಎಂದು ಹೇಳಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವಾದ ಅಕ್ಟೋಬರ್ 31 ರಂದು ಸಂಸ್ಥೆಯನ್ನು ದೇಶಕ್ಕೆ ಸಮರ್ಪಿಸಲಾಗುವುದು ಎಂದು ಅವರು ಹೇಳಿದ್ದಾರೆ.
ದೇಶದಲ್ಲಿ 15 ರಿಂದ 19 ವರ್ಷದೊಳಗಿನ ಸುಮಾರು 40 ಕೋಟಿ ಯುವಕರಿದ್ದಾರೆ. ಈ ಯುವಕರಿಗಾಗಿ ಮೈಭಾರತ್ ಎಂಬ ಸಂಸ್ಥೆಯನ್ನು ರಚಿಸಲು ನಿರ್ಧರಿಸಲಾಗಿದೆ. ಇದು ಯುವಕರಿಗೆ ಡಿಜಿಟಲ್ ವೇದಿಕೆಯಾಗಲಿದ್ದು, ಈ ಮೂಲಕ ಯುವಜನರಲ್ಲಿ ನಾಯಕತ್ವದ ಸಾಮರ್ಥ್ಯ ಮತ್ತು ಕೌಶಲ್ಯ ಅಭಿವೃದ್ಧಿಯತ್ತ ಗಮನ ಹರಿಸುತ್ತದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.