ನವದೆಹಲಿ: 19ನೇ ಏಷ್ಯನ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಸಶಸ್ತ್ರ ಪಡೆ ಸಿಬ್ಬಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಗದು ಬಹುಮಾನವನ್ನು ಘೋಷಿಸಿದ್ದಾರೆ.
ಚಿನ್ನದ ಪದಕ ವಿಜೇತರಿಗೆ 25 ಲಕ್ಷ ರೂಪಾಯಿ ಮತ್ತು ಬೆಳ್ಳಿ ಪದಕ ವಿಜೇತರಿಗೆ 15 ಲಕ್ಷ ರೂಪಾಯಿಗಳನ್ನು ನೀಡಲಾಗುವುದು. ಕಂಚಿನ ಪದಕ ವಿಜೇತರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ರಾಜನಾಥ್ ಸಿಂಗ್ ಮಂಗಳವಾರ ಘೋಷಣೆ ಮಾಡಿದ್ದಾರೆ.
ನವದೆಹಲಿಯಲ್ಲಿ ರಕ್ಷಣಾ ಸೇವೆಗಳ ಕ್ರೀಡಾ ಪಟುಗಳ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ತ ಅತ್ಯುತ್ತಮ ಪ್ರದರ್ಶನ ನೀಡಿದರೂ ಪದಕ ಗೆಲ್ಲಲು ಸಾಧ್ಯವಾಗದ ಆಟಗಾರರು ಸೇರಿದಂತೆ ಆಟಗಾರರ ಪ್ರಯತ್ನವನ್ನು ಶ್ಲಾಘಿಸಿದರು. ಫ್ಲೈಯಿಂಗ್ ಸಿಖ್ ಮಿಲ್ಕಾ ಸಿಂಗ್ ಅವರನ್ನು ಸ್ಮರಿಸಿ, 1960 ರ ರೋಮ್ನಲ್ಲಿ ನಡೆದ ಒಲಿಂಪಿಕ್ಸ್ನಲ್ಲಿ 400-ಮೀಟರ್ ಓಟದಲ್ಲಿ ತುಸು ಅಂತರದಿಂದ ಪದಕವನ್ನು ಕಳೆದುಕೊಂಡರು ಆದರೆ ಭಾರತೀಯ ಅಥ್ಲೆಟಿಕ್ಸ್ನ ಮಾರ್ಗದರ್ಶಿ ತಾರೆಯಾದರು ಎಂದಿದ್ದಾರೆ.
ಈ ಪದಕಗಳು ಮತ್ತು ಪ್ರದರ್ಶನಗಳು ದೇಶದ ಯುವಕರನ್ನು ಕ್ರೀಡಾ ಕ್ಷೇತ್ರದಲ್ಲಿ ಮುಂದೆ ಬರಲು ಪ್ರೇರೇಪಿಸುತ್ತವೆ ಎಂದು ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು. ವಿವಿಧ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾಗುವ ಸಶಸ್ತ್ರ ಪಡೆ ಸಿಬ್ಬಂದಿಯನ್ನು ಶ್ಲಾಘಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.