ನವದೆಹಲಿ: ಭಾರತ ಮತ್ತು ಕೆನಡಾ ನಡುವೆ ಉದ್ವಿಗ್ನತೆ ತಾರಕಕ್ಕೇರಿದ ತರುವಾಯ ಭಾರತವು ಕೆನಡಾದವರಿಎ ವೀಸಾಗಳನ್ನು ನೀಡುವುದನ್ನು ನಿಲ್ಲಿಸಿತ್ತು. ಇದೀಗ ಕೆಲವ ವರ್ಗಗಳಿಗೆ ವೀಸಾ ನೀಡುವುದನ್ನು ಪುನರಾರಂಭಿಸಲಾಗಿದೆ.
ಎರಡು ದೇಶಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆಯೇ ಭಾರತವು ಕೆನಡಾದಲ್ಲಿ ವೀಸಾ ಸೇವೆಗಳನ್ನು ಪುನರಾರಂಭಿಸಿದೆ. ಪ್ರವೇಶ ಸೇರಿದಂತೆ ವ್ಯಾಪಾರ, ವೈದ್ಯಕೀಯ ವೀಸಾ ಮತ್ತು ಕಾನ್ಫರೆನ್ಸ್ ವೀಸಾ ಸೇವೆಯನ್ನು (Business, Medical Visa and Conference Visa Service) ಪುನರಾರಂಭಿಸಲಾಗುವುದು ಎಂದು ಕೆನಡಾದಲ್ಲಿರುವ ಭಾರತದ ಹೈಕಮಿಷನ್ ಬುಧವಾರ ತಿಳಿಸಿದೆ.
ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್ 18 ರಂದು ಸಾರ್ವಜನಿಕವಾಗಿ ಆರೋಪಿಸಿದ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿವು. ಭಾರತ ಆರೋಪಗಳನ್ನು ತಳ್ಳಿಹಾಕಿದ್ದು, ಕೆಲವು ದಿನಗಳ ನಂತರ ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸುವುದಾಗಿ ಘೋಷಿಸಿತ್ತು. ಈಗಾಗಲೇ ಭಾರತದ ಎಚ್ಚರಿಕೆಯ ಹಿನ್ನಲೆಯಲ್ಲಿ ಭಾರತದಲ್ಲಿದ್ದ 41 ರಾಜತಾಂತ್ರಿಕರನ್ನು ಕೆನಡಾ ವಾಪಾಸ್ ಕರೆಸಿಕೊಂಡಿದೆ.
ಕೆನಡಾದ ಭಾರತೀಯ ರಾಯಭಾರ ಕಚೇರಿಗಳಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಮತ್ತು ಕೆನಡಾದವರು ಇತ್ತೀಚಿನ ಕ್ರಮಗಳನ್ನು ಗಣನೆಗೆ ತೆಗೆದುಕೊಂಡ ನಂತರ ಕೆಲವು ವರ್ಗಗಳ ವೀಸಾಗಳನ್ನು ನೀಡುವುದನ್ನು ಪುನರಾರಂಭಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.