ನವದೆಹಲಿ: ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ಸಾಂಪ್ರದಾಯಿಕ ಬೀಜಗಳ ಉತ್ಪಾದನೆಯನ್ನು ಹೆಚ್ಚಿಸುವ ಅಗತ್ಯವನ್ನು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಒತ್ತಿ ಹೇಳಿದ್ದಾರೆ.
ಸಹಕಾರಿ ಕ್ಷೇತ್ರದ ಮೂಲಕ ಸುಧಾರಿತ ಮತ್ತು ಸಾಂಪ್ರದಾಯಿಕ ಬೀಜಗಳ ಉತ್ಪಾದನೆಯ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದ ಶಾ, ಸಹಕಾರಿ ಕ್ಷೇತ್ರದಲ್ಲಿ ಬೀಜಗಳ ರಫ್ತು ಹೆಚ್ಚಿಸುವ ಅಗತ್ಯವನ್ನು ಒತ್ತಿ ಹೇಳಿದರು. ಬೀಜಗಳನ್ನು ರಫ್ತು ಮಾಡುವಲ್ಲಿ ಭಾರತದ ಪಾಲು ಶೇಕಡಾ ಒಂದಕ್ಕಿಂತ ಕಡಿಮೆ ಇದೆ, ಇದನ್ನು ಮುಂದಿನ ವರ್ಷಗಳಲ್ಲಿ ಹೆಚ್ಚಿಸಬೇಕಾದ ಅಗತ್ಯವಿದೆ ಎಂದರು.
ಪ್ರತಿಯೊಬ್ಬ ರೈತರು ಪ್ರಾಥಮಿಕ ಕೃಷಿ ಸಾಲ ಸಂಘಗಳ ಮೂಲಕ ಬೀಜಗಳನ್ನು ಉತ್ಪಾದಿಸಬಹುದು ಎಂದು ಹೇಳಿದ ಅವರು, ಇಂದು, ಇಡೀ ಪ್ರಪಂಚವು ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜಗಳನ್ನು ಬಯಸುತ್ತದೆ ಮತ್ತು ಭಾರತವು ಸಿರಿಧಾನು, ಬಜ್ರಾ, ಜೋಳ ಮತ್ತು ಅಂತಹ ಅನೇಕ ಸಿರಿಧಾನ್ಯಗಳ ಮೇಲೆ ಏಕಸ್ವಾಮ್ಯವನ್ನು ಹೊಂದಬಹುದು ಎಂದು ಶಾ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.