ಹೈದರಾಬಾದ್: ಹೊಸ ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಹೇಳಿದ್ದಾರೆ.
ಹೈದರಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಪಾಸಿಂಗ್ ಔಟ್ ಪರೇಡ್ ಅನ್ನು ಪರಿಶೀಲಿಸಿದ ನಂತರ 75 ನೇ ಬ್ಯಾಚ್ ಐಪಿಎಸ್ ಪ್ರೊಬೇಷನರ್ಗಳನ್ನು ಉದ್ದೇಶಿಸಿ ಮಾತನಾಡಿದ ಶಾ, ಸಂವಿಧಾನದ ಮನೋಭಾವವನ್ನು ಅರ್ಥಮಾಡಿಕೊಳ್ಳಲು ಮತ್ತು ಮಾನವತೆಯಿಂದ ಸಾಮಾನ್ಯ ಜನರಿಗೆ ಸೇವೆ ಸಲ್ಲಿಸಲು ಸಹಾನುಭೂತಿಯಿಂದ ಇರುವಂತೆ ಕೇಳಿಕೊಂಡರು.
ಹೊಸ ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್ ಸಂಸದೀಯ ಸಮಿತಿಯ ಪರಿಗಣನೆಯಲ್ಲಿದೆ ಮತ್ತು ಶೀಘ್ರದಲ್ಲೇ ಅಂಗೀಕಾರವಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು. ಜನರ ಹಕ್ಕುಗಳನ್ನು ರಕ್ಷಿಸಲು ಸುಧಾರಿತ ಐಪಿಸಿ, ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಸಂಬಂಧಿತ ಕಾನೂನುಗಳನ್ನು ಒಂದೇ ವ್ಯವಸ್ಥೆಯಡಿ ತರಲಾಗುತ್ತಿದೆ ಎಂದು ಹೇಳಿದ್ದಾರೆ.
ಹೊಸ ಕ್ರಿಮಿನಲ್ ನ್ಯಾಯ ವ್ಯವಸ್ಥೆ ಜಾರಿಗೆ ಬಂದಾಗ ಅಕಾಡೆಮಿಯಲ್ಲಿ ಮೂಲ ತರಬೇತಿಯನ್ನು ಪೂರ್ಣಗೊಳಿಸಿದ ಐಪಿಎಸ್ ಪ್ರೊಬೇಷನರ್ಗಳು ಪ್ರಮುಖ ಪಾತ್ರ ವಹಿಸುವಂತೆ ಅವರು ಹೇಳಿದರು. ದೇಶಕ್ಕೆ ಸ್ವಾತಂತ್ರ್ಯ ಬಂದು 100ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ 75ನೇ ಬ್ಯಾಚ್ನ ಅಧಿಕಾರಿಗಳು ಪ್ರಮುಖ ಪೊಲೀಸ್ ಹುದ್ದೆಯಲ್ಲಿರುತ್ತಾರೆ ಎಂದ ಅವರು, ಅಮೃತ್ ಕಾಲ್ ಬ್ಯಾಚ್ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಕಾಣಲು ಎಲ್ಲಾ ಪ್ರಯತ್ನಗಳನ್ನು ಮಾಡುವಂತೆ ಕೋರಿದರು. ದೇಶದಲ್ಲಿ ಪೊಲೀಸ್ ವ್ಯವಸ್ಥೆಯು ಶೂನ್ಯ ಸಹಿಷ್ಣುತೆಯ ಕ್ರಮವಾಗಿ ಬದಲಾಗುತ್ತಿದೆ ಎಂದು ಅವರು ಒತ್ತಿ ಹೇಳಿದರು.
ಬ್ಯಾಚ್ನಲ್ಲಿ ಹೆಚ್ಚಿನ ಸಂಖ್ಯೆಯ ಇಂಜಿನಿಯರಿಂಗ್ ಪದವೀಧರರನ್ನು ಉಲ್ಲೇಖಿಸಿದ ಅವರು, ಐಪಿಎಸ್ ಪ್ರೊಬೇಷನರ್ಸ್ ಒನ್ ನೇಷನ್ ಒನ್ ಡೇಟಾವನ್ನು ಮತ್ತಷ್ಟು ಮುಂದಕ್ಕೆ ಕೊಂಡೊಯ್ಯಲು ಪ್ರಯತ್ನಿಸಬೇಕು ಎಂದು ಕೇಳಿಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.