ನವದೆಹಲಿ: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಕಳವಳಗಳು ಮೂಡಿವೆ. ಕೊರೋನಾದ ಬಳಿಕ ಹೃದಯಾಘಾತಗಳು ಹೆಚ್ಚಾಗಲು ಕಾರಣವೇನು ಎಂಬ ಪ್ರಶ್ನೆಗಳು ಸಹಜವಾಗಿಯೇ ಎಲ್ಲರಲ್ಲೂ ಮೂಡಿದೆ. ಈ ನಿಟ್ಟಿನಲ್ಲಿ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ನಡೆಸಿದ ಅಧ್ಯಯನ ಮಹತ್ವದ ಸಂಗತಿಗಳನ್ನು ಬಹಿರಂಗಪಡಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಅವರು, “ಐಸಿಎಂಆರ್ ವಿವರವಾದ ಅಧ್ಯಯನವನ್ನು ಮಾಡಿದೆ. ಈ ಅಧ್ಯಯನದ ಪ್ರಕಾರ, ತೀವ್ರ ಸ್ವರೂಪದ ಕೋವಿಡ್ -19 ಸೋಂಕಿನಿಂದ ಬಳಲುತ್ತಿರುವ ಜನರು ಹೆಚ್ಚು ಶ್ರಮದಾಯಕವಾದ ಕೆಲಸವನ್ನು ಮಾಡಬಾರದು. ಅವರಿಗೆಸ್ವಲ್ಪ ಸಮಯದವರೆಗೆ ವಿಶ್ರಾಂತಿ ಪಡೆಯುವುದು ಅಗತ್ಯ. ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ವ್ಯಾಯಾಮ, ಓಟ ಮತ್ತು ಭಾರೀ ವ್ಯಾಯಾಮದಿಂದ ದೂರವಿರಿ, ಇದರಿಂದ ಹೃದಯಾಘಾತವನ್ನು ತಪ್ಪಿಸಬಹುದು” ಎಂದು ಸಲಹೆ ನೀಡಿದ್ದಾರೆ
ಅಲ್ಲದೇ ಕೋವಿಡ್ ಲಸಿಕೆಗಳು ಹೃದಯಾಘಾತಕ್ಕೆ ಕಾರಣವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
2022 ರ ಕೊನೆಯಲ್ಲಿ ಹೃದಯಾಘಾತದಿಂದ 20 ಮತ್ತು 30 ರ ವಯಸ್ಸಿನ ಜನರು ಸಾಯುತ್ತಿರುವ ಪ್ರಕರಣಗಳು ಹೆಚ್ಚು ವರದಿಯಾಗಿವೆ ಮತ್ತು ಅನೇಕ ಜನರು ಈ ಸಾವುಗಳನ್ನು ಕೋವಿಡ್ ಅಥವಾ ಅದರ ಚಿಕಿತ್ಸೆಯ ಜೊತೆಗೆ ಸಂಬಂಧಿಸುತ್ತಿದ್ದಾರೆ. ಹೀಗಾಗಿ ಐಸಿಎಂಆರ್ ಈ ನಿಟ್ಟಿನಲ್ಲಿ ಅಧ್ಯಯನ ಆರಂಭಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.