ನವದೆಹಲಿ: ಭಯೋತ್ಪಾದಕ ಗುಂಪು ಹಮಾಸ್ ವಿರುದ್ಧ ನಡೆಯುತ್ತಿರುವ ಇಸ್ರೇಲಿ ದಾಳಿಯ ನಡುವೆ ಗಾಜಾದಲ್ಲಿನ ಮಕ್ಕಳು ಎದುರಿಸುತ್ತಿರುವ ದುಃಸ್ಥಿತಿಯನ್ನು ಖಂಡಿಸಿ ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರು ಇತ್ತೀಚಿಗೆ ಟ್ವಿಟ್ ಮಾಡಿದ್ದರು. “ಪ್ರತಿದಿನ, ಗಾಜಾದಲ್ಲಿ 0-10 ವರ್ಷ ವಯಸ್ಸಿನ ಮುಗ್ಧ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಮತ್ತು ಜಗತ್ತು ಮೌನವಾಗಿದೆ. ಒಬ್ಬ ಕ್ರೀಡಾಪಟುವಾಗಿ, ನಾನು ಕೇವಲ ಮಾತನಾಡಬಲ್ಲೆ, ಆದರೆ ವಿಶ್ವ ನಾಯಕರು ಒಂದಾಗಲು ಮತ್ತು ಈ ಪ್ರಜ್ಞಾಶೂನ್ಯ ಹತ್ಯೆಯನ್ನು ಕೊನೆಗೊಳಿಸಲು ಇದು ಉತ್ತಮ ಸಮಯ” ಎಂದಿದ್ದರು.
ಈ ಟ್ವಿಟ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ಮಾಜಿ ಅಂತರರಾಷ್ಟ್ರೀಯ ಆಟಗಾರ ಡ್ಯಾನಿಶ್ ಕನೇರಿಯಾ ಅವರು, ಪಾಕಿಸ್ತಾನದ ದುಃಖಗಳ ಬಗ್ಗೆ ಮಾತನಾಡುವಂತೆ ಒತ್ತಾಯಿಸಿದ್ದಾರೆ. “ಇರ್ಫಾನ್ ಭಾಯ್, ನೀವು ಮಕ್ಕಳ ನೋವನ್ನು ಅರ್ಥಮಾಡಿಕೊಂಡಿದ್ದೀರಿ ಎಂದು ನನಗೆ ಸಂತೋಷವಾಗಿದೆ ಮತ್ತು ಈ ವಿಷಯದಲ್ಲಿ ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ. ಆದರೆ ದಯವಿಟ್ಟು ಪಾಕಿಸ್ತಾನಿ ಹಿಂದೂಗಳ ಬಗ್ಗೆಯೂ ಮಾತನಾಡಿ. ಇಲ್ಲಿ ಪಾಕಿಸ್ತಾನದಲ್ಲಿ ಪರಿಸ್ಥಿತಿ ತುಂಬಾ ಭಿನ್ನವಾಗಿಲ್ಲ” ಎಂದಿದ್ದಾರೆ.
ಅಕ್ಟೋಬರ್ 7 ರಂದು ಹಮಾಸ್ ಭಯೋತ್ಪಾದಕರು ಭೂಮಿ, ಸಮುದ್ರ ಮತ್ತು ವಾಯುಮಾರ್ಗದ ಮೂಲಕ ದಕ್ಷಿಣ ಇಸ್ರೇಲ್ಗೆ ನುಸುಳಿ ನಾಗರಿಕರನ್ನು ಕೊಂದು ಒತ್ತೆಯಾಳುಗಳಾಗಿ ಮಾಡಿದ ನಂತರ ಇಸ್ರೇಲ್ ವೈಮಾನಿಕ ದಾಳಿ ಮತ್ತು ಗಾಜಾದ ಮೇಲೆ ನೆಲದ ಆಕ್ರಮಣವನ್ನು ಪ್ರಾರಂಭಿಸಿದೆ. ಈ ಸಂದರ್ಭದಲ್ಲಿ ಗಾಜಾದಲ್ಲಿ ನಡೆಯುತ್ತಿರುವ ಮಕ್ಕಳ ಹತ್ಯೆಯನ್ನು ಅನೇಕರು ಖಂಡಿಸುತ್ತಿದ್ದಾರೆ. ಅದರಲ್ಲಿ ಇರ್ಫಾನ್ ಪಠಾನ್ ಕೂಡ ಒಬ್ಬರು.
Irfan bhai, I’m happy that you understand the pain of children, and I stand with you on that. But please do speak about Pakistani Hindus as well. The situation is not very different here in Pakistan. https://t.co/lr8Rth5s90
— Danish Kaneria (@DanishKaneria61) November 3, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.