ನವದೆಹಲಿ: ಅನುಭವಿ ಮಾಹಿತಿ ಅಧಿಕಾರಿಯಾಗಿರುವ ಹೀರಾಲಾಲ್ ಸಮರಿಯಾ ಅವರು ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಮುಖ್ಯಸ್ಥರಾಗಿ ಚುಕ್ಕಾಣಿ ಹಿಡಿದಿದ್ದಾರೆ, ಈ ಪ್ರತಿಷ್ಠಿತ ಸ್ಥಾನವನ್ನು ಪಡೆದ ಮೊದಲ ದಲಿತ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸಮರಿಯಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ವೈ.ಕೆ. ಸಿನ್ಹಾ ಅವರ ಅವಧಿ ಅಕ್ಟೋಬರ್ 3 ರಂದು ಕೊನೆಗೊಂಡಿದ್ದರಿಂದ ಹುದ್ದೆ ತೆರವಾಗಿತ್ತು. ಅವರು ನವೆಂಬರ್ 7, 2020 ರಂದು ಸಿಐಸಿಯಲ್ಲಿ ಮಾಹಿತಿ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರಿಂದ ತೆರವಾದ ಹುದ್ದೆಗೆ 63 ವರ್ಷದ ಸಮರಿಯಾ ಅವರನ್ನು ಆಯ್ಕೆ ಮಾಡಲಾಯಿತು.
ಸೆಪ್ಟೆಂಬರ್ 14, 1960 ರಂದು ರಾಜಸ್ಥಾನದ ಭರತ್ಪುರ ಜಿಲ್ಲೆಯ ಪಹಾಡಿ ಎಂಬ ಹಳ್ಳಿಯಲ್ಲಿ ಜನಿಸಿದ ಹೀರಾಲಾಲ್ ಸಮರಿಯಾ ಅವರು ರಾಜಸ್ಥಾನ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದಾರೆ.
ಐಎಎಸ್ ಅಧಿಕಾರಿಯಾದ ನಂತರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಅವರು ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿದ್ದರು.
ಅವರು ತೆಲಂಗಾಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಆಯುಕ್ತರು, ಆಂಧ್ರಪ್ರದೇಶದಲ್ಲಿ ಪರಿಸರ ಇಲಾಖೆಯ ಆಯುಕ್ತರು ಮತ್ತು ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದ ಜಂಟಿ ಕಾರ್ಯದರ್ಶಿಗಳಂತಹ ವಿವಿಧ ನಿರ್ಣಾಯಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.
ಸಮರಿಯಾ ಅವರು ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡ ನಂತರ ಈಗಲೂ ಎಂಟು ಮಾಹಿತಿ ಆಯುಕ್ತರ ಹುದ್ದೆ ಖಾಲಿ ಇದೆ. ಪ್ರಸ್ತುತ ಆಯೋಗದಲ್ಲಿ ಇಬ್ಬರು ಮಾಹಿತಿ ಆಯುಕ್ತರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.