ನವದೆಹಲಿ: ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರು ಸೋಮವಾರ ನವದೆಹಲಿಯಲ್ಲಿ ಭಾರತ್ ಬ್ರಾಂಡ್ನಡಿಯಲ್ಲಿ ಗೋಧಿ ಹಿಟ್ಟು-ಅಟ್ಟಾ ಮಾರಾಟಕ್ಕಾಗಿ 100 ಮೊಬೈಲ್ ವ್ಯಾನ್ಗಳಿಗೆ ಚಾಲನೆ ನೀಡಿದರು.
ಕೇಂದ್ರೀಯ ಭಂಡಾರ, ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ ಮತ್ತು ನ್ಯಾಷನಲ್ ಕೋಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ ಸೇರಿದಂತೆ ದೇಶಾದ್ಯಂತ ಎರಡು ಸಾವಿರಕ್ಕೂ ಹೆಚ್ಚು ಮಳಿಗೆಗಳಲ್ಲಿ ಈ ಅಟ್ಟಾ ಪ್ರತಿ ಕಿಲೋಗ್ರಾಂಗೆ 27.5 ರೂಪಾಯಿಗೆ ಲಭ್ಯವಾಗಲಿದೆ ಎಂದು ಗೋಯಲ್ ಹೇಳಿದ್ದಾರೆ.
ಭಾರತ್ ಬ್ರಾಂಡ್ ಅಟ್ಟಾ ಚಿಲ್ಲರೆ ಮಾರಾಟವನ್ನು ಪ್ರಾರಂಭಿಸುವುದರಿಂದ ಮಾರುಕಟ್ಟೆಯಲ್ಲಿ ಕೈಗೆಟುಕುವ ದರದಲ್ಲಿ ಸರಬರಾಜು ಹೆಚ್ಚಾಗುತ್ತದೆ ಮತ್ತು ಈ ಆಹಾರ ಪದಾರ್ಥದ ಬೆಲೆಗಳನ್ನು ನಿರಂತರವಾಗಿ ಮಿತಗೊಳಿಸಲು ಸಹಾಯ ಮಾಡುತ್ತದೆ ಎಂದು ಸಚಿವರು ಹೇಳಿದರು.
ಮಾರುಕಟ್ಟೆಯಲ್ಲಿ ಬೆಲೆ ಸ್ಥಿರತೆಯನ್ನು ಸೃಷ್ಟಿಸುವುದು ಮತ್ತು ದೇಶದ ರೈತರು ಮತ್ತು ಗ್ರಾಹಕರು ಇಬ್ಬರಿಗೂ ಬೆಂಬಲ ನೀಡುವುದು ಇದರ ಹಿಂದಿನ ಉದ್ದೇಶವಾಗಿದೆ ಎಂದು ಅವರು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರು ಗ್ರಾಹಕರಿಗೆ ಹಾಗೂ ರೈತರಿಗೆ ನೆರವಾಗುವ ದೂರದೃಷ್ಟಿ ಹೊಂದಿದ್ದಾರೆ ಎಂದು ಅವರು ಹೇಳಿದರು.
ಕೇಂದ್ರದ ಹಸ್ತಕ್ಷೇಪವು ಅಗತ್ಯ ವಸ್ತುಗಳ ಬೆಲೆಯನ್ನು ಸ್ಥಿರಗೊಳಿಸಿದೆ ಎಂದ ಗೋಯಲ್, ಈ ಹಿಂದೆಯೂ ಟೊಮ್ಯಾಟೊ, ಈರುಳ್ಳಿ ಬೆಲೆ ತಗ್ಗಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.