ನವದೆಹಲಿ: ಲೋಕಸಭೆಯ ನೈತಿಕ ಸಮಿತಿಯು ಗುರುವಾರ ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟನೆಗೊಳಿಸಲು ಶಿಫಾರಸ್ಸು ಮಾಡಿದೆ. ಅವರ ವಿರುದ್ಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ‘ನಗದಿಗಾಗಿ ಪ್ರಶ್ನೆ’ ಆರೋಪಗಳನ್ನು ಮಾಡಿದ್ದರು. ಈ ಆರೋಪಗಳ ವರದಿಯನ್ನು ನೈತಿಕ ಅಂಗೀಕರಿಸಿದ ನಂತರ ಅವರನ್ನು ಸದನದಿಂದ ಉಚ್ಚಾಟಿಸಲು ಶಿಫಾರಸು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇಂದು ನಡೆದ ಸಭೆಯಲ್ಲಿ ನೈತಿಕ ಸಮಿತಿಯ ಆರು ಸದಸ್ಯರು ವರದಿಯನ್ನು ಬೆಂಬಲಿಸಿದರೆ, ನಾಲ್ವರು ಅದನ್ನು ವಿರೋಧಿಸಿದರು ಎಂದು ಅಧ್ಯಕ್ಷ ವಿನೋದ್ ಕುಮಾರ್ ಸೋಂಕರ್ ತಿಳಿಸಿದ್ದಾರೆ.
ಕಳೆದ ತಿಂಗಳು ಮೊಯಿತ್ರಾ ಅವರು ಲೋಕಸಭೆಯಲ್ಲಿ ಉದ್ಯಮಿಯಿಂದ ನಗದು ಪಡೆದು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ದುಬೆ ಆರೋಪಿಸಿದ್ದರು. ಆರೋಪಕ್ಕೆ ಸಂಬಂಧಿಸಿದಂತೆ ದುಬೆ ಅವರು ಎರಡು ಪತ್ರಗಳನ್ನು ಬರೆದಿದ್ದರು. ಒಂದನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಬರೆದಿದ್ದಾರೆ. ಇದರಲ್ಲಿ ಮೊಯಿತ್ರಾ ಅವರು ಹಿರಾನಂದಾನಿ ಗ್ರೂಪ್ ಹಿತಾಸಕ್ತಿಗಳನ್ನು ರಕ್ಷಿಸಲು ಲಂಚ ತೆಗೆದುಕೊಂಡಿದ್ದಾರೆ ಎಂಬ ಆರೋಪಗಳಿವೆ.
ಇನ್ನೊಂದು ಪತ್ರವನ್ನು ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಬರೆದಿದ್ದು, ಮೊಯಿತ್ರಾ ಅವರು ಲೋಕಸಭೆಯ ಲಾಗ್-ಇನ್ ರುಜುವಾತುಗಳ ಐಪಿ ವಿಳಾಸಗಳನ್ನು ಬೇರೊಬ್ಬರಿಗೆ ನೀಡಿದ್ದಾರೆ ಎಂಬ ಬಗ್ಗೆ ಪರಿಶೀಲಿಸುವಂತೆ ಒತ್ತಾಯಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.