ನವದೆಹಲಿ: ಯೆಮೆನ್ ಪ್ರಜೆಯೊಬ್ಬರ ಹತ್ಯೆಗೆ ಸಂಬಂಧಿಸಿದಂತೆ 2017ರಿಂದ ಯೆಮೆನ್ ದೇಶದಲ್ಲಿ ಸೆರೆವಾಸ ಅನುಭವಿಸುತ್ತಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ವಿರುದ್ಧದ ಮೇಲ್ಮನವಿಯನ್ನು ಯೆಮೆನ್ ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಪ್ರಿಯಾ ಯೆಮೆನ್ ಪ್ರಜೆ ತಲಾಲ್ ಅಬ್ದೋ ಮಹದಿಯ ವಶದಲ್ಲಿದ್ದ ತನ್ನ ಪಾಸ್ಪೋರ್ಟ್ ಅನ್ನು ಹಿಂಪಡೆಯುವ ಪ್ರಯತ್ನವಾಗಿ ಸೆಡೇಟಿವ್ ಚುಚ್ಚುಮದ್ದನ್ನು ಚುಚ್ಚಿ ಆತನನ್ನು ಹತ್ಯೆ ಮಾಡಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆ ಸೆರೆವಾಸದಲ್ಲಿದ್ದಾಳೆ ಮತ್ತು ಮರಣದಂಡನೆಗೆ ಗುರಿಯಾಗಿದ್ದಾಳೆ
ಇನ್ನೊಂದೆಡೆ ಪ್ರಿಯಾ ಅವರ ತಾಯಿ ಯೆಮೆನ್ಗೆ ಪ್ರಯಾಣಿಸಲು ಅನುಮತಿ ನೀಡುವಂತೆ ಮಾಡಿದ ಮನವಿಯ ಕುರಿತು ಒಂದು ವಾರದೊಳಗೆ ನಿರ್ಧಾರ ತೆಗೆದುಕೊಳ್ಳುವಂತೆ ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರವನ್ನು ಒತ್ತಾಯಿಸಿದೆ. ಅರಬ್ ರಾಷ್ಟ್ರದಲ್ಲಿ ನಡೆಯುತ್ತಿರುವ ಅಂತರ್ಯುದ್ಧದ ಕಾರಣ 2017 ರಿಂದ ಜಾರಿಗೆ ಬಂದಿರುವ ಭಾರತೀಯ ಪ್ರಜೆಗಳಿಗೆ ಪ್ರಯಾಣ ನಿಷೇಧದ ಹೊರತಾಗಿಯೂ ಯೆಮೆನ್ಗೆ ಪ್ರಯಾಣಿಸಲು ಅನುಮತಿ ಕೋರಿ ಪ್ರಿಯಾಳ ತಾಯಿ ಈ ವರ್ಷದ ಆರಂಭದಲ್ಲಿ ದೆಹಲಿ ಹೈಕೋರ್ಟ್ಗೆ ಮೊರೆ ಹೋಗಿದ್ದರು.
ಮಹದಿ ಕುಟುಂಬದೊಂದಿಗೆ ಸಂದಾನ ನಡೆಸಿ ಮಗಳನ್ನು ಬಿಡಿಸಿಕೊಳ್ಳುವ ಪ್ರಯತ್ನ ಮಾಡಲು ಪ್ರಿಯಾ ತಾಯಿ ಯೆಮೆನ್ಗೆ ಪ್ರಯಾಣಿಸಲು ಬಯಸುತ್ತಿದ್ದಾರೆ ಎನ್ನಲಾಗಿದೆ.
ವಕೀಲರಾದ ಸುಭಾಷ್ ಚಂದರನ್ ಅವರು, ಪ್ರಿಯಾ ತಾಯಿಗೆ ಮಗಳನ್ನು ಉಳಿಸುವ ಏಕೈಕ ಮಾರ್ಗವೆಂದರೆ ಸಂತ್ರಸ್ಥನ ಕುಟುಂಬದೊಂದಿಗೆ ನೇರ ಮಾತುಕತೆ ನಡೆಸುವುದು, ಈ ಪ್ರಕ್ರಿಯೆಗೆ ಯೆಮೆನ್ನಲ್ಲಿ ಅವಳ ಭೌತಿಕ ಉಪಸ್ಥಿತಿಯ ಅಗತ್ಯವಿರುತ್ತದೆ. ಆದರೆ ಭಾರತೀಯ ಪ್ರಜೆಗಳಿಗೆ ಅಸ್ತಿತ್ವದಲ್ಲಿರುವ ಪ್ರಯಾಣ ನಿಷೇಧವು ಇದಕ್ಕೆ ತಡೆಗೋಡೆಯಾಗಿದೆ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.