ಶ್ರೀನಗರ: ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಸಿರುವ ಭದ್ರತಾ ಪಡೆಗಳು ಇಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಸಂಘಟನೆಗೆ ಸೇರಿದ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಗುರುವಾರ ಮಧ್ಯಾಹ್ನ ಆರಂಭವಾದ ಎನ್ಕೌಂಟರ್ ಶುಕ್ರವಾರ ಬೆಳಗಿನ ಜಾವದವರೆಗೂ ಮುಂದುವರಿದಿದ್ದು, ಭಯೋತ್ಪಾದಕರು ಎರಡು ವಿಭಿನ್ನ ಸ್ಥಳಗಳಲ್ಲಿ ಅಡಗಿಕೊಂಡಿದ್ದರು. ಭದ್ರತಾ ಪಡೆಗಳು ಹತರಾದ ಭಯೋತ್ಪಾದಕರ ಶವಗಳನ್ನು ಇನ್ನೂ ವಶಪಡಿಸಿಕೊಂಡಿಲ್ಲ, ಇನ್ನೂ ಕಾರ್ಯಾಚರಣೆ ಮುಂದುವರೆದಿದೆ.
ಈ ನಡುವೆ, ಮತ್ತೊಂದು ಕಾರ್ಯಾಚರಣೆಯಲ್ಲಿ, ಭದ್ರತಾ ಪಡೆಗಳು ಬುಧವಾರ ಉರಿ ಸೆಕ್ಟರ್ನಲ್ಲಿ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಮೂಲಕ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ. ಈ ಗುಂಡಿನ ಚಕಮಕಿಯಲ್ಲಿ ಎಲ್ಇಟಿಯ ಉನ್ನತ ಕಮಾಂಡರ್ ಬಶೀರ್ ಅಹ್ಮದ್ ಮಲಿಕ್ ಸೇರಿದಂತೆ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ (ಪಿಒಕೆ) ಜಮ್ಮು ಮತ್ತು ಕಾಶ್ಮೀರಕ್ಕೆ ಹಲವಾರು ಭಯೋತ್ಪಾದಕರ ಒಳನುಸುಳುವಿಕೆಗೆ ಮಲಿಕ್ ಕಾರಣನಾಗಿದ್ದನು ಮತ್ತು ಅವನ ನಿರ್ಮೂಲನೆಯು ಎಲ್ಒಸಿಯಾದ್ಯಂತ ಭಯೋತ್ಪಾದಕ ಜಾಲಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದು ಸೇನೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.