ಅಯೋಧ್ಯೆ: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಮಂದಿರದ ರಾಮಲಲ್ಲಾ ಪ್ರತಿಷ್ಠಾಪನೆಗೂ ಮುಂಚಿತವಾಗಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ರಾಮ ಮಂದಿರದ ನಿರ್ಮಾಣ ಕಾರ್ಯದ ಚಿತ್ರಣಗಳನ್ನು ಬಿಡುಗಡೆ ಮಾಡಿದೆ.
ಟ್ರಸ್ಟ್ ನೇತೃತ್ವದಲ್ಲಿ ರಾಮ ಮಂದಿರದ ನಿರ್ಮಾಣ ಕಾರ್ಯಗಳು ಕ್ಷೀಪ್ರಗತಿಯಲ್ಲಿ ಸಾಗುತ್ತಿದೆ. ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡುವ ಕಾರ್ಯಕ್ಕಾಗಿ ಸಿದ್ಧತೆಗಳನ್ನು ಭರದಿಂದ ನಡೆಸಲಾಗುತ್ತಿದೆ. ರಾಮ ಮಂದಿರದ ನೆಲದ ಕೆತ್ತನೆಯ ದೃಶ್ಯಗಳನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹಂಚಿಕೊಂಡಿದೆ.
ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾ ಮೂರ್ತಿಯ 90 ಶೇಕಡ ಕಾರ್ಯ ಪೂರ್ಣಗೊಂಡಿದೆ ಎಂದು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸಂಪತ್ ರಾಯ್ ಇತ್ತೀಚಿಗೆ ಹೇಳಿದ್ದರು.
“ರಾಮ ಜನ್ಮಭೂಮಿ ಮಂದಿರದಲ್ಲಿ ಭಗವಾನ್ ರಾಮನ 5 ವರ್ಷದ ಮಗುವಿನ ರೂಪವನ್ನು ಚಿತ್ರಿಸುವ 4’3” ವಿಗ್ರಹವನ್ನು ನಿರ್ಮಿಸಲಾಗುತ್ತಿದೆ. ಮೂರು ಕುಶಲಕರ್ಮಿಗಳು ಮೂರು ವಿಭಿನ್ನ ಕಲ್ಲಿನ ತುಂಡುಗಳಲ್ಲಿ ವಿಗ್ರಹವನ್ನು ನಿರ್ಮಿಸುತ್ತಿದ್ದಾರೆ. ಅಯೋಧ್ಯೆಯ ಮೂರು ಕಡೆ ಇದರ ನಿರ್ಮಾಣವಾಗುತ್ತಿದೆ.ಕಾರ್ಯ 90 ಪ್ರತಿಶತದಷ್ಟು ಸಿದ್ಧವಾಗಿವೆ ಮತ್ತು ಅಂತಿಮ ಕಾರ್ಯವು ಸುಮಾರು ಒಂದು ವಾರ ತೆಗೆದುಕೊಳ್ಳುತ್ತದೆ,” ಎಂದು ಚಂಪತ್ ರಾಯ್ ಹೇಳಿದ್ದಾರೆ.
“ವಿಗ್ರಹವನ್ನು ನೆಲ ಮಹಡಿಯಲ್ಲಿರುವ ‘ಗ್ರಹಗೃಹ’ದಲ್ಲಿ ಸ್ಥಾಪಿಸಲಾಗುವುದು. ದೇವಾಲಯದ ನೆಲ ಮಹಡಿ ಬಹುತೇಕ ಸಿದ್ಧವಾಗಿದೆ. ಹಾಗಾಗಿ ‘ಪ್ರಾಣ-ಪ್ರತಿಷ್ಠೆಗೆ ಯಾವುದೇ ತೊಂದರೆಯಾಗುವುದಿಲ್ಲ. ಸಮಾರಂಭಕ್ಕೆ ಕನಿಷ್ಠ 4000 ಸಾಧುಗಳನ್ನು ಆಹ್ವಾನಿಸಲಾಗುತ್ತದೆ. ಮುಂದಿನ ಆಹ್ವಾನಿತರ ಪಟ್ಟಿಯೂ ಸಿದ್ಧವಾಗಿದೆ” ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವರ್ಷ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರತಿಷ್ಠಾಪನೆ ಸಮಾರಂಭದ ವೈದಿಕ ಆಚರಣೆಗಳು ಮುಂದಿನ ವರ್ಷ ಜನವರಿ 16 ರಂದು ಮುಖ್ಯ ಸಮಾರಂಭದ ಒಂದು ವಾರಕ್ಕೂ ಮುಂಚಿತವಾಗಿ ಪ್ರಾರಂಭವಾಗುತ್ತವೆ.
श्री राम जय राम जय जय राम!
Shri Ram Jai Ram Jai Jai Ram! pic.twitter.com/SZQlSwZl5X
— Shri Ram Janmbhoomi Teerth Kshetra (@ShriRamTeerth) December 8, 2023
श्री राम जन्मभूमि मंदिर निर्माण कार्य – वर्तमान स्थिति
Shri Ram Janmabhoomi Mandir construction work – Current status pic.twitter.com/IdQ3krCDoB
— Shri Ram Janmbhoomi Teerth Kshetra (@ShriRamTeerth) December 8, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.