ನವದೆಹಲಿ: ಆದಾಯ ತೆರಿಗೆ (ಐಟಿ) ಇಲಾಖೆಯ ದಾಳಿಯ ವೇಳೆ ಕಾಂಗ್ರೆಸ್ ಸಂಸದ ಧೀರಜ್ ಕುಮಾರ್ ಸಾಹು ಅವರ ಒಡಿಶಾ ಮತ್ತು ಜಾರ್ಖಂಡ್ನಲ್ಲಿನ ನಿವೇಶನಗಳಿಂದ ಕೋಟ್ಯಂತರ ರೂಪಾಯಿ ವಶಪಡಿಸಿಕೊಂಡ ಘಟನೆ ರಾಜಕೀಯ ವಲಯದಲ್ಲಿ ಭಾರೀ ಕೋಲಾಹಲ ಎಬ್ಬಿಸಿದೆ. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸಂಸದ ಧೀರಜ್ ಪ್ರಸಾದ್ ಸಾಹು ವಿರುದ್ಧ ಭಾರೀ ಪ್ರತಿಭಟನೆ ನಡೆಸಿದರು.
ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಸಾಹುಗೆ ಸಂಬಂಧಿಸಿದ ಸ್ಥಳಗಳಲ್ಲಿ ನೋಟುಗಳ ರಾಶಿಯೇ ಪತ್ತೆಯಾಗಿದ್ದು, ಈಗಲೂ ಅದನ್ನು ಎಣಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಲಾಗಿದೆ. ಪ್ರಧಾನಿ ಮೋದಿ ಕೂಡ ನೋಟುಗಳ ರಾಶಿ ಪತ್ತೆಯಾದ ಬಗೆಗಿನ ವರದಿಯನ್ನು ಟ್ವಿಟ್ ಮಾಡಿ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದರು.
ಮೂರು ಬಾರಿ ರಾಜ್ಯಸಭಾ ಸಂಸದರಾಗಿದ್ದ ಧೀರಜ್ ಸಾಹು ಎರಡು ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಮೊದಲ ಬಾರಿಗೆ, ಅವರು ಜೂನ್ 2009 ರಲ್ಲಿ ರಾಜ್ಯಸಭಾ ಸಂಸದರಾದರು ಮತ್ತು 2018 ರಲ್ಲಿ ಅವರು ಮತ್ತೊಮ್ಮೆ ಸಂಸದರಾಗಿ ಆಯ್ಕೆಯಾದರು. ಈ ವೇಳೆ ಅವರು ತಮ್ಮ ಆಸ್ತಿ ಮೌಲ್ಯ 34 ಕೋಟಿ ರೂಪಾಯಿಗಳು ಎಂದು ಘೋಷಿಸಿಕೊಂಡಿದ್ದರು.
#WATCH | BJP workers stage protest against Congress MP Dhiraj Prasad Sahu over the recovery of unaccounted money worth Rs 200 crore from him during the Income Tax raids. pic.twitter.com/6ZZLwcqEGk
— ANI (@ANI) December 9, 2023
#incometax raids at #dheerajsahu #200 crore pic.twitter.com/ddsmE3C5Kj
— Shailesh yadav (@shaileshyadav75) December 9, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.