ನವದೆಹಲಿ: ಆರೋಗ್ಯ ಸೇವೆಯನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ಗುರಿಯನ್ನು ಸಹಕಾರಗೊಳಿಸುವ ನಿಟ್ಟಿನಲ್ಲಿ ಮಹತ್ವದ ಮೈಲುಗಲ್ಲು ಸಾಧಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯ ಅಡಿಯಲ್ಲಿ ಒಂದು ಕೋಟಿಗೂ ಹೆಚ್ಚು ಆಯುಷ್ಮಾನ್ ಕಾರ್ಡ್ಗಳನ್ನು ರಚಿಸಲಾಗಿದೆ. ವಿಕ್ಷಿತ್ ಭಾರತ್ ಅಡಿ ಆಯೋಜಿಸಲಾದ 79,487 ಆರೋಗ್ಯ ಶಿಬಿರಗಳಲ್ಲಿ ಒಟ್ಟು 1 ಕೋಟಿ 31 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಈ ಆರೋಗ್ಯ ಶಿಬಿರಗಳನ್ನು ಇದುವರೆಗೆ 3, 462 ಗ್ರಾಮ ಪಂಚಾಯತ್ಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಡೆಸಲಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ತಲುಪಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಳೆದ ತಿಂಗಳು 15 ರಂದು ಜಾರ್ಖಂಡ್ನ ಖುಂಟಿಯಿಂದ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು.
ಅಲ್ಲದೇ, ಆರೋಗ್ಯ ಶಿಬಿರದಲ್ಲಿ ಆಯುಷ್ಮಾನ್ ಕಾರ್ಡ್ಗಳ ರಚನೆ, ಟಿಬಿ ರೋಗಿಗಳ ತಪಾಸಣೆ ನಡೆಸಲಾಗುತ್ತಿದೆ ಮತ್ತು ಶಂಕಿತ ಪ್ರಕರಣಗಳನ್ನು ಹೆಚ್ಚಿನ ತಪಾಸಣೆಗಾಗಿ ಕಳುಹಿಸಲಾಗುತ್ತಿದೆ.
ಪ್ರಧಾನ ಬುಡಕಟ್ಟು ಜನಸಂಖ್ಯೆಯಿರುವ ಪ್ರದೇಶಗಳಲ್ಲಿ, ಕುಡಗೋಲು ಕಣ ರೋಗ (ಸಿಕಲ್ ಸೆಲ್ ಡಿಸೀಸ್) ಪತ್ತೆಗಾಗಿ ಅರ್ಹ ಜನಸಂಖ್ಯೆಯ ತಪಾಸಣೆಯನ್ನು ಮಾಡಲಾಗುತ್ತಿದೆ.
ಇದುವರೆಗೆ ಐದು ಲಕ್ಷಕ್ಕೂ ಹೆಚ್ಚು ಜನರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಅವರಲ್ಲಿ 21,793 ಮಂದಿ ಪಾಸಿಟಿವ್ ಎಂದು ಕಂಡುಬಂದಿದ್ದು, ಉನ್ನತ ಚಿಕಿತ್ಸೆಗೆ ಕಳುಹಿಸಿಕೊಡಲಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.