ನವದೆಹಲಿ: ಭಾರತ-ಪಾಕ್ ಗಡಿಯಲ್ಲಿ ಪಾಕಿಸ್ಥಾನ ನಡೆಸುತ್ತಿರುವ ದೌರ್ಜನ್ಯಗಳ ವೀಡಿಯೋಗಳು ವಿಶ್ವಾದ್ಯಂತ ಎಲ್ಲಾ ರಾಷ್ಟ್ರಗಳಿಗೂ ಪಾಕ್ನ ನೈಜ ಸ್ವರೂಪ ತಿಳಿಯುವಂತೆ ಮಾಡಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದಕ್ಕೆ ಪ್ರತಿಪಕ್ಷಗಳೂ ಬೆಂಬಲಿಸಿವೆ.
1947ರಿಂದ ಪಾಕ್ ಆಕ್ರಮಿತ ಕಾಶ್ಮೀರದ ನಿವಾಸಿಗಳು ಕಿರುಕುಳ, ಯಾತನೆಯನ್ನು ಅನುಭವಿಸುತ್ತಲೇ ಬಂದಿದ್ದಾರೆ ಕಾಶ್ಮೀರದ ಉಧಂಪುರ್ನ್ನು ಪ್ರತಿನಿಧಿಸುವ ಲೋಕಸಭೆಯ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಜಿತೇಂದರ್ ಸಿಂಗ್ ತಿಳಿಸಿದ್ದಾರೆ. ಗಡಿ ಭಾಗದ ಜನರಲ್ಲಿ ಸುದೀರ್ಘ ಕಾಲದಿಂದಲೂ ಅವ್ಯವಸ್ಥೆ, ಅಸಮಾಧಾನ ಕಂಡುಬಂರುತ್ತಿದೆ. ಪಾಕಿಸ್ಥಾನದ ಇತರ ಪ್ರದೇಶಗಳಿಗೆ ಹೋಲಿಸಿದರೆ ಈ ಪ್ರದೇಶದ ಜನರು ಎದುರಿಸುತ್ತಿರುವ ತಾರತಮ್ಯವೇ ಇದಕ್ಕೆ ಪ್ರಮುಖ ಕಾರಣ. ಇದು ಕೇವಲ ಅಭಿವೃದ್ಧಿಯ ದೃಷ್ಟಿಯಿಂದ ಮಾತ್ರವಲ್ಲ, ಆರೋಗ್ಯ, ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳಿಂದಲೂ ವಂಚಿತರಾಗಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.
ಈ ಸಂಬಂಧ ಮುಜಫರಾಬಾದ್, ಗಿಲ್ಗಿಟ್, ಕೋಟ್ಲಿ ಸೇರಿದಂತೆ ಪಾಕ್ ಆಕ್ರಮಿತ ಪ್ರದೇಶಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ಇದನ್ನು ತಡೆಯಲು ಪಾಕ್ ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ಅಲ್ಲಿಯ ಜನರಿಗೆ ಯಾವುದೇ ಪ್ರಾಪ್ರಭುತ್ವದ ಹಕ್ಕಿಲ್ಲ. ಅಲ್ಲದೇ ಪಾಕಿಸ್ಥಾನ ಅಲ್ಲಿನ ಅಲ್ಪಸಂಖ್ಯಾತ ಗುಂಪುಗಳ ಜನರೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದೆ ಎಂದು ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿ.ಕೆ. ಸಿಂಗ್ ಹೇಳಿದ್ದಾರೆ.
ಈ ವಿಚಾರವನ್ನು ವಿಶ್ವಸಂಸ್ಥೆ ಮುಂದಿಡಲು ಕೇಂದ್ರ ಸರ್ಕಾರಕ್ಕೆ ಇದು ಉತ್ತಮ ಅವಕಾಶ ಎಂದು ಕಾಂಗ್ರೆಸ್ ಕೂಡ ಹೇಳಿಕೊಂಡಿದೆ.
ಈ ಪ್ರದೇಶದಲ್ಲಿ ಅಶಾಂತಿ ಉಂಟಾಗಿದ್ದು, ಇದನ್ನು ಭಾರತದೊಂದಿಗೆ ವಿಲೀನಗೊಳಿಸುವಂತೆ ಬೇಡಿಕೆಗಳೂ ಹೆಚ್ಚಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.