ಲಕ್ನೋ: ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಲಕ್ನೋದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಅಯೋಧ್ಯೆ ಉಸ್ತುವಾರಿ ಸಚಿವ ಸೂರ್ಯ ಪ್ರತಾಪ್ ಶಾಹಿ ಅವರು ಭಾಗವಹಿಸಿದ್ದು, ಬೃಹತ್ ಸಮಾರಂಭಕ್ಕೆ ನಡೆಸಲಾಗುತ್ತಿರುವ ಸಿದ್ಧತೆಗಳ ಬಗ್ಗೆ ಸಿಎಂಗೆ ವಿವರಗಳನ್ನು ನೀಡಿದರು.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರದ ನಿರ್ಮಾಣ ಮತ್ತು ಆಡಳಿತದ ಜವಾಬ್ದಾರಿಯನ್ನು ಹೊಂದಿದೆ. ಸಮಾರಂಭಕ್ಕೆ ವ್ಯಾಪಕ ಸಿದ್ಧತೆಗಳು ನಡೆಯುತ್ತಿದ್ದು, ಸಮಾಜದ ವಿವಿಧ ಭಾಗಗಳ ಸಾವಿರಾರು ಗಣ್ಯರು ಮತ್ತು ವ್ಯಕ್ತಿಗಳನ್ನು ಸೆಳೆಯುವ ನಿರೀಕ್ಷೆಯಿದೆ. ಪ್ರಾಣ ಪ್ರತಿಷ್ಠ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ರಾಮಲಲಾನ ಪ್ರತಿಷ್ಠಾಪನೆಗಾಗಿ ವೈದಿಕ ಆಚರಣೆಗಳು ಜನವರಿ 16 ರಂದು ಪ್ರಾರಂಭವಾಗುತ್ತದೆ. ವಾರಣಾಸಿ ಮೂಲದ ಅರ್ಚಕ ಲಕ್ಷ್ಮೀಕಾಂತ್ ದೀಕ್ಷಿತ್ ಅವರ ನೇತೃತ್ವದಲ್ಲಿ ಆಚರಣೆಗಳು ನಡೆಯುತ್ತದೆ. ಅಯೋಧ್ಯೆಯು ಜನವರಿ 14 ರಿಂದ ಜನವರಿ 22 ರವರೆಗೆ ಅಮೃತ ಮಹೋತ್ಸವವನ್ನು ಆಚರಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.