ನಾಸಿಕ್: ಮಹಾರಾಷ್ಟ್ರ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾಸಿಕ್ನಲ್ಲಿರುವ ಕಲಾರಾಮ್ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದರು. ಇಂದು ಬೆಳಗ್ಗೆ ರಾಷ್ಟ್ರೀಯ ಯುವಜನೋತ್ಸವದ ಉದ್ಘಾಟನೆಗೆ ಮುನ್ನ ಮಹಾರಾಷ್ಟ್ರದ ನಾಸಿಕ್ನಲ್ಲಿ ಪ್ರಧಾನಿ ಮೆಗಾ ರೋಡ್ಶೋ ನಡೆಸಿದರು.
ಬಳಿಕ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರೊಂದಿಗೆ ಮೋದಿ ಕಲಾರಾಮ್ ದೇಗುಲಕ್ಕೆ ಭೇಟಿ ನೀಡಿ ಅಲ್ಲಿ ಪೂಜೆ, ಭಜನೆ, ಕೀರ್ತನೆಗಳಲ್ಲಿ ಭಾಗಿಯಾದರು. ದೇಶದ ಆವರಣವನ್ನು ಗುಡಿಸಿ ಸಾರಿಸಿ ಸ್ವಚ್ಛಗೊಳಿಸಿದರು.
ಅರ್ಚಕರು ರಾಮಾಯಣದ ‘ಯುದ್ಧ ಕಾಂಡ’ ಭಾಗವನ್ನು ಹಾಡಿದರು – ಇದು ಭಗವಾನ್ ರಾಮನು ಅಯೋಧ್ಯೆಗೆ ಹಿಂದಿರುಗುವುದನ್ನು ಚಿತ್ರಿಸುತ್ತದೆ. AI ಭಾಷಾಂತರ ಸಾಧನದ ಮೂಲಕ ಮರಾಠಿಯಲ್ಲಿ ಹಾಡಿದ ಪದ್ಯಗಳು ಹಿಂದಿಯಲ್ಲಿ ಮೋದಿಯನ್ನು ತಲುಪಿದವು.
ಮುಂಬೈನಲ್ಲಿ ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾದ ಅಟಲ್ ಸೇತುವನ್ನು ಪ್ರಧಾನಿ ಮೋದಿ ಇಂದು ಉದ್ಘಾಟಿಸಿದರು. ಒಟ್ಟು ₹ 17,840 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಟಲ್ ಸೇತು ನಿರ್ಮಾಣ ಮಾಡಲಾಗಿದೆ.
ಉದ್ಘಾಟನೆಯ ನಂತರ ನವಿ ಮುಂಬೈನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.
At the Shree Kalaram Temple, I had the profound experience of hearing verses from the Bhavarth Ramayana written in Marathi by Sant Eknath Ji, eloquently narrating Prabhu Shri Ram's triumphant return to Ayodhya. This recitation, resonating with devotion and history, was a very… pic.twitter.com/rYqf5YR5qu
— Narendra Modi (@narendramodi) January 12, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.