ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೂ ಮುನ್ನ ರಾಮಚರಿತಮಾನಸಗಳಿಗೆ ಬೇಡಿಕೆ ಹಲವು ಪಟ್ಟು ಹೆಚ್ಚಿದೆ. ಇದು ಕಳೆದ 50 ವರ್ಷಗಳಲ್ಲಿ ಮೊದಲ ಬಾರಿಗೆ ಗೋರಖ್ಪುರದ ಗೀತಾ ಪ್ರೆಸ್ನಲ್ಲಿ ರಾಮಚರಿತಮಾನಸದ ದಾಸ್ತಾನು ಕೊರತೆಗೆ ಕಾರಣವಾಗಿದೆ.
ಮಾಧ್ಯಮ ವರದಿಗಳ ಪ್ರಕಾರ, ಸಮಾರಂಭದ ಪೂರ್ವದಲ್ಲಿ ಹನುಮಾನ್ ಚಾಲೀಸಾ ಮತ್ತು ಶ್ರೀಮದ್ ಭಗವತ್ ಗೀತೆಯ ಬೇಡಿಕೆಯೂ ಹೆಚ್ಚಾಗಿದೆ.
ಪತ್ರಿಕಾಲಯದ ಟ್ರಸ್ಟಿಯೊಬ್ಬರು ರಾಮಚರಿತಮಾನಸಕ್ಕೆ ಬೇಡಿಕೆಯ ಹೆಚ್ಚಳವಾದ ಹಿನ್ನೆಲೆಯಲ್ಲಿ ಸಂಪೂರ್ಣ ಸಂಗ್ರಹ ಖಾಲಿ ಆಗಿದೆ ಆದರೆ ಬೇಡಿಕೆಯನ್ನು ಸರಿದೂಗಿಸಲು ಹೆಚ್ಚಿನ ರಾಮಚರಿತಮಾನಸಗಳನ್ನು ಪ್ರಕಟಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆಯಲಿದ್ದು, ದೇಶದ ಗಣ್ಯರು ಮತ್ತು ರಾಜಕಾರಣಿಗಳ ಉಪಸ್ಥಿತಿಯಿಂದ ಇದು ಕೂಡಿರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.