ನವದೆಹಲಿ: ದೇಶದಾದ್ಯಂತ ದೇವಾಲಯ ಸಂಕೀರ್ಣಗಳಲ್ಲಿ ಸ್ವಚ್ಛತಾ ಸಂಬಂಧಿತ ಚಟುವಟಿಕೆಗಳು ಭಾನುವಾರದಿಂದ ಆರಂಭಗೊಂಡಿದೆ. ಅಯೋಧ್ಯೆಯಲ್ಲಿ ರಾಮ ಲಲಾ ಪ್ರತಿಷ್ಠಾಟನೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕರೆಯಂತೆ ಸ್ವಚ್ಛತಾ ಕಾರ್ಯಗಳನ್ನು ನಡೆಸಲಾಗುತ್ತಿದೆ.
ಮಹರ್ಷಿ ವಾಲ್ಮಿಕಿ ವಿಮಾನ ನಿಲ್ದಾಣ ಅಯೋಧ್ಯಾ ಧಾಮವನ್ನು ಉದ್ಘಾಟಿಸಿದ ಮೋದಿ ಅವರು ಮಕರ ಸಂಕ್ರಾಂತಿಯ ದಿನದಿಂದ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸುವಂತೆ ಕರೆ ನೀಡಿದ್ದರು.
ನಿನ್ನೆಯಿಂದ ದೇಶವ್ಯಾಪಿ ಸ್ವಚ್ಛತಾ ಕಾರ್ಯ ಆರಂಭವಾಗಿದೆ. ದೇಗುಲಗಳಲ್ಲಿ ನಡೆಯುತ್ತಿರುವ ಸ್ವಚ್ಛತಾ ಕಾರ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ಸಾಮಾಜಿಕ ಮಾಧ್ಯಮದ ಪೋಸ್ಟ್ನಲ್ಲಿ, ಎಲ್ಲಾ ವರ್ಗದ ಜನರು ಪ್ರಯತ್ನಗಳನ್ನು ಪುಷ್ಟೀಕರಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಸಂತಸ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಪ್ರಯತ್ನಗಳನ್ನು NaMo ಆಪ್ನಲ್ಲಿ ಹಂಚಿಕೊಳ್ಳುವಂತೆ ಮೋದಿ ಜನರನ್ನು ಒತ್ತಾಯಿಸಿದರು.
Through the day, I have seen exceptional efforts of Swachhata related activities in temple complexes. It’s heartening to see people from all walks of life enriching the efforts. Keep sharing such efforts on the NaMo App in the coming days. https://t.co/wrEjmpJD2o #SwachhTeerth
— Narendra Modi (@narendramodi) January 14, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.