ಬೆಂಗಳೂರು: 2047ಕ್ಕೆ ವಿಕಸಿತ ಭಾರತದ ಸಂಕಲ್ಪವನ್ನು ನರೇಂದ್ರ ಮೋದಿಜೀ ಅವರು ಹೊಂದಿದ್ದಾರೆ. ಅದನ್ನು ಈಡೇರಿಸಲು ಮತ್ತೊಮ್ಮೆ ಮೋದಿ ಸಂಕಲ್ಪಕ್ಕೆ ಜನತೆ ಭಾರಿ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇವತ್ತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಜೀ ಅವರ ಸೂಚನೆ ಮೇರೆಗೆ ಗೋಡೆ ಬರಹ ಆರಂಭಿಸಲಾಗಿದೆ. ಪ್ರತಿ ಬೂತ್ನಲ್ಲಿ 5 ಕಡೆ ಗೋಡೆ ಬರಹಕ್ಕೆ ಚಾಲನೆ ಕೊಡಲಾಗುತ್ತದೆ. 2024ಕ್ಕೆ ಮತ್ತೊಮ್ಮೆ ಮೋದಿ ಎಂಬುದು ದೇಶದ ಅಪೇಕ್ಷೆಯಾಗಿದೆ ಎಂದು ತಿಳಿಸಿದರು.
ವಿಕಸಿತ ಭಾರತ ಸಂಕಲ್ಪದ ಮೂಲಕ ಮೋದಿಜೀ ಅವರ ಜನಪರ ಯೋಜನೆಗಳು ಜನರನ್ನು ತಲುಪುತ್ತಿವೆ. ರಾಜ್ಯದ ಜನತೆ ಕೂಡ ಬಿಜೆಪಿ, ಮೋದಿಜೀ ಅವರ ಬಗ್ಗೆ ಬಹಳ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದು ವಿವರಿಸಿದರು.
ಹಾವೇರಿ ಮಹಿಳೆ ಮೇಲೆ ಅತ್ಯಾಚಾರ ಸಂಬಂಧ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಈ ವಿಷಯದಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಪದೇಪದೇ ಈ ರೀತಿಯ ಘಟನೆಗಳು ಆಗುತ್ತಿವೆ. ಬೆಳಗಾವಿ, ಹಾವೇರಿಯ ಮಹಿಳೆಯರ ಮೇಲಿನ ದೌರ್ಜನ್ಯದಂಥ ಘಟನೆಗಳು ನಾಚಿಕೆಗೇಡಿನ ಸಂಗತಿ. 7ರಂದು ಈ ಘಟನೆ ನಡೆದು ಒಂದು ವಾರ ಕಳೆದರೂ ಪೊಲೀಸರು ತಲೆ ಕೆಡಿಸಿಕೊಂಡಿಲ್ಲ. ಎಫ್ಐಆರ್ ಕೂಡ ದಾಖಲಿಸಿಲ್ಲ. ಮತ್ತೊಂದು ಕಡೆ ಈ ದುರ್ಘಟನೆಯನ್ನು ಮುಚ್ಚಿ ಹಾಕುವ ಪ್ರಯತ್ನ ಆಗುತ್ತಿದೆ. ಇದು ಬೇಸರದ ಮತ್ತು ಖಂಡನೀಯ ವಿಚಾರ ಎಂದರು.
ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ; ಇದು ಗಂಭೀರವಾದ ವಿಚಾರ. ಆದರೆ, ರಾಜ್ಯ ಸರಕಾರ ಇದನ್ನು ಹಗುರವಾಗಿ ಪರಿಗಣಿಸಿದೆ. ಪೊಲೀಸರು ರಾಜ್ಯ ಕಾಂಗ್ರೆಸ್ ಸರಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ದುರ್ದೈವ ಎಂದು ನುಡಿದರು.
ಬಿಜೆಪಿಯ ಹಿರಿಯರು ಅಲ್ಲಿಗೆ ಭೇಟಿ ಕೊಟ್ಟು ಸಾಂತ್ವನ ಹೇಳಿದ್ದಾರೆ. ರಾಜ್ಯ ಸರಕಾರ ಎಚ್ಚೆತ್ತುಕೊಂಡು ವಿಶೇóಷ ತನಿಖಾ ತಂಡ (ಎಸ್ಐಟಿ) ರಚಿಸಲು ಕೋರಿದ್ದೇವೆ. ರಾಜ್ಯ ಸರಕಾರವು ಇದನ್ನು ಮುಚ್ಚಿ ಹಾಕಬಾರದು ಎಂದು ಒತ್ತಾಯಿಸಿದರು. ರಾಜ್ಯ ಸರಕಾರ ಮತ್ತು ಸಚಿವರು ಉಡಾಫೆ ಮಾತನಾಡುತ್ತಾರೆ. ಇದು ಹೆಣ್ಣಿನ ಮಾನದ, ಗೌರವದ ಪ್ರಶ್ನೆ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು. ಎಸ್ಐಟಿ ರಚಿಸಲು ಆಗ್ರಹಿಸದೆ, ವಿಪಕ್ಷವಾಗಿ ನಾವು ಇನ್ನೇನು ಮಾಡಲು ಸಾಧ್ಯ ಎಂದು ಅವರು ಮರುಪ್ರಶ್ನೆ ಹಾಕಿದರು.
ಶೇಷಾದ್ರಿಪುರದ ಮಾರುತಿ ಆಸ್ಪತ್ರೆಯ ಬಳಿ ನಡೆಯುವ ಗೋಡೆ ಬರಹ ಕಾರ್ಯಕ್ರಮದಲ್ಲೂ ಅವರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.