ನವದೆಹಲಿ: ಅಯೋಧ್ಯೆಯ ಭವ್ಯ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಬೇಕಾದ ರಾಮಲಲಾನ ಸುಂದರ ಮೂರ್ತಿಯನ್ನು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಕೊನೆಗೂ ಅಧಿಕೃತವಾಗಿ ಆಯ್ಕೆ ಮಾಡಿದೆ. ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿರುವ ವಿಗ್ರಹ ಆಯ್ಕೆಯಾಗಿದೆ ಎಂದು ಟ್ರಸ್ಟ್ ಪ್ರಕಟಿಸಿದೆ.
ಒಟ್ಟು ಮೂರು ಮೂರ್ತಿಗಳನ್ನು ಕೆತ್ತನೆ ಮಾಡಲಾಗಿದೆ. ಮೈಸೂರಿನ ಅರುಣ್ ಯೋಗಿರಾಜ್, ಕರ್ನಾಟಕದ ಇಡಗುಂಜಿಯ ಜಿ.ಎಲ್.ಭಟ್ ಮತ್ತು ರಾಜಸ್ಥಾನದ ಸತ್ಯನಾರಾಯಣ ಪಾಂಡೆಗೆ ರಾಮ ಲಲಾ ವಿಗ್ರಹ ಕೆತ್ತನೆ ಜವಾಬ್ದಾರಿ ನೀಡಲಾಗಿತ್ತು. ಈ ಪೈಕಿ ಅರುಣ್ ಯೋಗಿರಾಜ್ ಕೆತ್ತನೆಯ ಕೃಷ್ಣ ಶಿಲೆಯ ಬಾಲರಾಮನ ವಿಗ್ರಹ ಅಂತಿಮವಾಗಿ ಆಯ್ಕೆಯಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಕೃಷ್ಣಶಿಲೆಯಲ್ಲಿ ಅರುಣ್ ಯೋಗಿರಾಜ್ ರಾಮಲಲಾನ ಮೂರ್ತಿ ಕೆತ್ತನೆ ಮಾಡಿದ್ದಾರೆ. 6 ತಿಂಗಳಲ್ಲಿ ವಿಗ್ರಹ ಕೆತ್ತನೆ ಪೂರ್ಣಗೊಳಿಸಿದ್ದಾರೆ. 1.5 ಟನ್ ತೂಕದ ಮತ್ತು ಪಾದದಿಂದ ಹಣೆಯವರೆಗೆ 51 ಇಂಚು ಉದ್ದದ ಒಂದು ವಿಗ್ರಹವನ್ನು ಕೆತ್ತನೆ ಮಾಡಿದ್ದಾರೆ. ಮುಖದ ಮೃದುತ್ವ, ಕಣ್ಣುಗಳಲ್ಲಿನ ನೋಟ, ನಗು, ದೇಹ ಇತ್ಯಾದಿಗಳನ್ನು ಗಮನದಲ್ಲಿಟ್ಟುಕೊಂಡು ಯೋಗಿರಾಜ್ ಅವರ ವಿಗ್ರಹವನ್ನು ಆಯ್ಕೆ ಮಾಡಲಾಗಿದೆ.
ನೀರು ಹಾಗೂ ಪಂಚಾಮೃತ ಅಭಿಷೇಕ ಮಾಡಿದರೂ ಈ ವಿಗ್ರಹದ ಕಲ್ಲಿನ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ. ಅಲ್ಲದೆ, ವಿಗ್ರಹದ ಅಭಿಷೇಕದಿಂದ ತೆಗೆದ ತೀರ್ಥ ಹಾಗೂ ಪಂಚಾಮೃತ ಸೇವಿಸಿದರೆ ಯಾರ ದೇಹದ ಮೇಲೂ ಅಡ್ಡ ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗಿದೆ.
कर्नाटक के प्रसिद्ध मूर्तिकार श्री अरुण योगीराज द्वारा कृष्णशिला पर निर्मित मूर्ति का चयन भगवान श्री रामलला सरकार के श्री विग्रह के रूप में प्रतिष्ठित होने हेतु किया गया है।
The Murti sculpted on Krishna Shila, by renowned sculptor Shri Arun Yogiraj, has been selected as Shri…
— Shri Ram Janmbhoomi Teerth Kshetra (@ShriRamTeerth) January 15, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.