ಲಕ್ನೋ: ದೇವಾಲಯಗಳನ್ನು ಸ್ವಚ್ಛಗೊಳಿಸುವ ಪ್ರಧಾನಮಂತ್ರಿಯವರ ಕರೆಗೆ ಪ್ರತಿಕ್ರಿಯೆಯಾಗಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಲಕ್ನೋದ ಹನುಮಾನ್ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದರು. ಸೇನಾ ದಿನದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವರು ಲಕ್ನೋಗೆ ಬಂದಿದ್ದರು. ಸಿಂಗ್ ಅವರು ಬೆಳಿಗ್ಗೆ ಲಕ್ನೋ ವಿಶ್ವವಿದ್ಯಾಲಯದ ಬಳಿಯ ಹನುಮಾನ್ ಸೇತು ದೇವಸ್ಥಾನಕ್ಕೆ ತೆರಳಿ, ಅಲ್ಲಿ ನೆಲವನ್ನು ಸ್ವಚ್ಛಗೊಳಿಸಿದರು. ಬಳಿಕ ಪ್ರಾರ್ಥನೆ ಸಲ್ಲಿಸಿದರು.
“ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸುತ್ತಮುತ್ತಲಿನ ದೇವಾಲಯಗಳಲ್ಲಿ ಸ್ವಚ್ಛತೆಗೆ ಕೊಡುಗೆ ನೀಡುವಂತೆ ಎಲ್ಲಾ ದೇಶವಾಸಿಗಳಿಗೆ ಕರೆ ನೀಡಿದ್ದಾರೆ. ಇಂದು, ನಾನು ಲಕ್ನೋದ ಹನುಮಾನ್ ಸೇತು ದೇವಸ್ಥಾನಕ್ಕೆ ಹೋಗಿ ಸ್ವಚ್ಛತೀರ್ಥ ಅಭಿಯಾನದಡಿಯಲ್ಲಿ ಶ್ರಮದಾನವನ್ನು ಮಾಡಿದ್ದೇನೆ ಮತ್ತು ಹನುಮಾನ್ ಜೀ ಅವರ ಸೇವೆ ಮಾಡುವ ಭಾಗ್ಯವನ್ನು ಪಡೆದುಕೊಂಡಿದ್ದೇನೆ” ಎಂದು ಸಚಿವರು ‘ಎಕ್ಸ್’ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಭಾನುವಾರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ದೇಶಾದ್ಯಂತ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಅಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಸಮಾರಂಭದ ದಿನವಾದ ಜನವರಿ 22 ರವರೆಗೆ ಸ್ವಚ್ಛತಾ ಕಾರ್ಯ ಮುಂದುವರಿಯುತ್ತದೆ.
#WATCH | Defence Minister Rajnath Singh cleans Hanuman Setu temple in Lucknow, Uttar Pradesh as a part of his cleanliness drive here. pic.twitter.com/I9APDZjUzS
— ANI (@ANI) January 16, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.