ನವದೆಹಲಿ: ಪಾಕಿಸ್ಥಾನದ ಮೇಲೆ ಇರಾನ್ನ ಕ್ಷಿಪಣಿ ದಾಳಿಯು ಆ ಎರಡು ರಾಷ್ಟ್ರಗಳಿಗೆ ಮಾತ್ರ ಸಂಬಂಧಿಸಿದ ವಿಷಯವಾಗಿದೆ ಎಂದು ಭಾರತ ಹೇಳಿದೆ. ಆದರೆ ಭಾರತ ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ ಮತ್ತು ದೇಶಗಳು ತಮ್ಮ ಸ್ವರಕ್ಷಣೆಗಾಗಿ ತೆಗೆದುಕೊಳ್ಳುವ ಕ್ರಮಗಳನ್ನು ಅರ್ಥಮಾಡಿಕೊಳ್ಳುತ್ತದೆ ಎಂದು ವಿದೇಶಾಂಗ ಸಚಿವಾಲಯವು ಹೇಳಿದೆ.
“ಇದು ಇರಾನ್ ಮತ್ತು ಪಾಕಿಸ್ಥಾನದ ನಡುವಿನ ವಿಷಯವಾಗಿದೆ. ಭಾರತಕ್ಕೆ ಸಂಬಂಧಿಸಿದಂತೆ, ನಾವು ಭಯೋತ್ಪಾದನೆಯ ಬಗ್ಗೆ ರಾಜಿಯಾಗದ ಶೂನ್ಯ ಸಹಿಷ್ಣುತೆಯನ್ನು ಹೊಂದಿದ್ದೇವೆ. ದೇಶಗಳು ತಮ್ಮ ಆತ್ಮರಕ್ಷಣೆಗಾಗಿ ತೆಗೆದುಕೊಳ್ಳುವ ಕ್ರಮಗಳನ್ನು ನಾವು ಅರ್ಥಮಾಡಿಕೊಂಡಿದ್ದೇವೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.
ನಿನ್ನೆ ಇರಾನ್ ಪಾಕಿಸ್ಥಾನದಲ್ಲಿನ ಸುನ್ನಿ ಬಲೂಚಿ ಭಯೋತ್ಪಾದಕ ಗುಂಪು ಜೈಶ್ ಅಲ್ ಅದ್ಲ್ನ ಎರಡು ನೆಲೆಗಳ ಮೇಲೆ ಡ್ರೋನ್ಗಳು ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಈ ಭಯೋತ್ಪಾದಕ ಗುಂಪು ಈ ಹಿಂದೆ ಪಾಕಿಸ್ತಾನದ ಗಡಿ ಪ್ರದೇಶದಲ್ಲಿ ಇರಾನ್ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿತ್ತು. ಡಿಸೆಂಬರ್ 15 ರಂದು ಜೈಶ್ ಅಲ್-ಅದ್ಲ್ ಕಾರ್ಯಕರ್ತರು ಮತ್ತೊಂದು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಪರಿಣಾಮ 11 ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದರು.
“ನಾವು ಪಾಕಿಸ್ತಾನದ ನೆಲದಲ್ಲಿ ಇರಾನ್ ಭಯೋತ್ಪಾದಕ ಗುಂಪನ್ನು ಮಾತ್ರ ಗುರಿಯಾಗಿಸಿಕೊಂಡಿದ್ದೇವೆ. ನಾವು ಪಾಕಿಸ್ತಾನದ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುತ್ತೇವೆ, ಆದರೆ ರಾಷ್ಟ್ರೀಯ ಭದ್ರತೆಯೊಂದಿಗೆ ರಾಜಿ ಮಾಡಿಕೊಳ್ಳಲು ಅಥವಾ ಅದರೊಂದಿಗೆ ಆಟವಾಡಲು ನಾವು ಅನುಮತಿಸುವುದಿಲ್ಲ” ಎಂದು ಇರಾನ್ ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.