ನವದೆಹಲಿ: ದೇಶದ ಎಲ್ಲಾ ನಾಗರಿಕರಿಗೆ ಪೌಷ್ಟಿಕತೆ ಮತ್ತು ಆರೋಗ್ಯ ಖಾತರಿಗಳನ್ನು ಒದಗಿಸುವ ತಮ್ಮ ಸರ್ಕಾರದ ಸಂಕಲ್ಪವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಪುನರುಚ್ಚರಿಸಿದ್ದಾರೆ.
ಇಂದು ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕಸಿತ್ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಮೋದಿ, ಕಳೆದ ಒಂಬತ್ತು ವರ್ಷಗಳಲ್ಲಿ 25 ಕೋಟಿಗೂ ಹೆಚ್ಚು ಜನರು ಬಡತನದಿಂದ ಹೊರಬಂದಿದ್ದಾರೆ. ಪಾರದರ್ಶಕ ಮತ್ತು ದಕ್ಷ ಆಡಳಿತ ನೀಡುವ ಮೂಲಕ ಬಡತನವನ್ನು ಸೋಲಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಕಳೆದ ಹತ್ತು ವರ್ಷಗಳಲ್ಲಿ ನಾಲ್ಕು ಕೋಟಿಗೂ ಹೆಚ್ಚು ಜನರಿಗೆ ಪಕ್ಕಾ ಮನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು, ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಎರಡು ತಿಂಗಳುಗಳನ್ನು ಪೂರೈಸಿದೆ ಮತ್ತು ಈ ಯಾತ್ರೆಯ ಮೂಲಕ ತನ್ನ ಎಲ್ಲಾ ಯೋಜನೆಗಳನ್ನು ತಳಮಟ್ಟಕ್ಕೆ ಕೊಂಡೊಯ್ಯುವ ಗುರಿಯನ್ನು ಸರ್ಕಾರ ಹೊಂದಿದೆ. ದೇಶಾದ್ಯಂತ ಜನರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ತಿಂಗಳಲ್ಲೂ ಯಾತ್ರೆ ಮುಂದುವರಿಯಲಿದೆ ಎಂದರು. ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯು ಜನ ಆಂದೋಲನವಾಗಿ ಮಾರ್ಪಟ್ಟಿದ್ದು, ಇಲ್ಲಿಯವರೆಗೆ 15 ಕೋಟಿ ಜನರು ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ ಎಂದರು.
70 ರಿಂದ 80 ರಷ್ಟು ಪಂಚಾಯತ್ಗಳು ವಿಕಸಿತ ಭಾರತ್ ಸಂಕಲ್ಪ ಯಾತ್ರೆಯ ವ್ಯಾಪ್ತಿಗೆ ಬಂದಿವೆ ಎಂದು ಪ್ರಧಾನಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.