ನವದೆಹಲಿ: ಸರ್ಕಾರಿ ನೌಕರರು ಜನವರಿ 22 ರಂದು ಅರ್ಧ ದಿನದ ರಜೆಯನ್ನು ಪಡೆಯಲಿದ್ದಾರೆ. ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯಲಿರುವ ಪ್ರಾಣ ಪ್ರತಿಷ್ಠಾ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜನವರಿ 22ರಂದು ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ಇರಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಖಚಿತಪಡಿಸಿದ್ದು, ಸರ್ಕಾರ ಈ ಸಂಬಂಧ ಅಧಿಸೂಚನೆಯನ್ನೂ ಹೊರಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ಅದ್ಧೂರಿ ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಸಚಿವರಿಂದ ಪ್ರತಿಕ್ರಿಯೆಯನ್ನು ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಮನೆಗಳಲ್ಲಿ ದೀಪಗಳನ್ನು ಹಚ್ಚಿ ಬಡವರಿಗೆ ಅನ್ನ ದಾನ ಮಾಡುವಂತೆ ಸಚಿವರುಗಳಿಗೆ ತಿಳಿಸಲಾಗಿದೆ. ಅಲ್ಲದೇ ಈ ದಿನವನ್ನು ದೀಪಾವಳಿಯಂತೆ ಆಚರಿಸುವಂತೆ ಕೋರಲಾಗಿದೆ.
ಜನವರಿ 22 ರ ಕಾರ್ಯಕ್ರಮದ ನಂತರ ಸಾರ್ವಜನಿಕರಿಗೆ ರಾಮ ಮಂದಿರ ತೆರೆದ ಬಳಿಕ ಅಯೋಧ್ಯೆಗೆ ಪ್ರವಾಸವನ್ನು ಏರ್ಪಡಿಸಲು ಸಚಿವರುಗಳಿಗೆ ಸೂಚನೆ ನೀಡಲಾಗಿದೆ. ಈ ಪ್ರವಾಸಗಳಲ್ಲಿ ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡುವಂತೆ ಮತ್ತು ಅವರ ಕ್ಷೇತ್ರಗಳ ನಿವಾಸಿಗಳನ್ನು ಅಯೋಧ್ಯೆಗೆ ಕರೆದೊಯ್ಯುವಂತ ಸಲಹೆ ನೀಡಲಾಗಿದೆ ಎನ್ನಲಾಗಿದೆ.
ಭಗವಾನ್ ರಾಮನ ಜನ್ಮಸ್ಥಳವೆಂದು ನಂಬಲಾದ ಉತ್ತರ ಪ್ರದೇಶದ ಅಯೋಧಯೆ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ಸಿದ್ಧತೆಗಳಿಂದ ತುಂಬಿ ತುಳುಕುತ್ತಿದೆ. ಈ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ನಟರು ಮತ್ತು ಕ್ರಿಕೆಟಿಗರು ಸೇರಿದಂತೆ ಹಲವಾರು ಸಾರ್ವಜನಿಕ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.