ನವದೆಹಲಿ: ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರದ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಿಯಮಗಳು ಮತ್ತು ಆಚರಣೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ. ಮೂಲಗಳ ಪ್ರಕಾರ ಮೋದಿ “ಯಾಮ್ ನಿಯಮ”ಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ ಎಂದು ಹೇಳಲಾಗಿದೆ.
11-ದಿನಗಳ ಕಠಿಣ ತಪಸ್ಸು ಮತ್ತು ಧ್ಯಾನ ಮತ್ತು ವಿಶೇಷ ಸಾತ್ವಿಕ್ ಆಹಾರದೊಂದಿಗೆ ಮನಸ್ಸು ಮತ್ತು ದೇಹವನ್ನು ಶುದ್ಧೀಕರಿಸುವುದನ್ನು ಈ ನಿಯಮ ಒಳಗೊಂಡಿರುತ್ತದೆ, ಈರುಳ್ಳಿ, ಬೆಳ್ಳುಳ್ಳಿ ಮತ್ತು ಹಲವಾರು ಇತರ ವಸ್ತುಗಳನ್ನು ತಿನ್ನುವುದು ನಿಷಿದ್ಧವಾಗಿದೆ.
ಪ್ರಧಾನಿಯವರು ಕೇವಲ ಹೊದಿಕೆ ಹೊದ್ದು ನೆಲದ ಮೇಲೆ ಮಲಗುತ್ತಿದ್ದಾರೆ ಮತ್ತು ಸೀಯಾಳದ ನೀರನ್ನು ಮಾತ್ರ ಕುಡಿಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜನವರಿ 12 ರಿಂದಲೇ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ವಿಧಿವಿಧಾನಗಳು ಆರಂಭಗೊಂಡಿವೆ. ಜನವರಿ 22 ರಂದು ಪ್ರಧಾನಿ ಮೋದಿ ಅವರು “ಪ್ರಾಣ ಪ್ರತಿಷ್ಠೆ” ಪೂಜೆ ನೆರವೇರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದ ಅರ್ಚಕರ ತಂಡವು ಪ್ರಾಣ ಪ್ರತಿಷ್ಠೆಯ ಮುಖ್ಯ ವಿಧಿಗಳನ್ನು ನಡೆಸಲಿದೆ.
“ಪ್ರಾಣ ಪ್ರತಿಷ್ಠೆ’ ಎಂದರೆ ವಿಗ್ರಹಕ್ಕೆ ದೈವಿಕತೆಯನ್ನು ತುಂಬುವುದು ಮತ್ತು ದೇವಾಲಯದಲ್ಲಿ ಪೂಜಿಸುವ ಪ್ರತಿಯೊಂದು ವಿಗ್ರಹಕ್ಕೂ ಪ್ರಾಣ ಪ್ರತಿಷ್ಠೆ ಅತ್ಯಗತ್ಯವಾಗಿರುತ್ತದೆ. ಜನವರಿ 22 ರಂದು ಮಧ್ಯಾಹ್ನ 12.30 ಕ್ಕೆ ಶುಭ ಸಮಯದಲ್ಲಿ ಈ ಕಾರ್ಯ ನಡೆಯುತ್ತದೆ ಎಂದು ದೇವಾಲಯದ ಸಮಿತಿ ತಿಳಿಸಿದೆ.
ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ ಕಪ್ಪುಶಿಲೆಯ ಐದು ವರ್ಷ ವಯಸ್ಸಿನ ರಾಮನ ಮೂರ್ತಿಯನ್ನು ನಿನ್ನೆ ರಾತ್ರಿ ದೇವಸ್ಥಾನಕ್ಕೆ ಕೊಂಡೊಯ್ಯಲಾಯಿತು.
ವಿಶೇಷ ಪೂಜೆ ಸಮಾರಂಭದ ನಂತರ ಅದನ್ನು ಗರ್ಭಗುಡಿಯಲ್ಲಿ ಇರಿಸಲಾಯಿತು. ಇಂದು ಅದನ್ನು ಔಪಚಾರಿಕವಾಗಿ ಸ್ಥಾಪನೆ ಮಾಡಲಾಗುತ್ತದೆ ಎಂದು ಶ್ರೀರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.
ದೇವಾಲಯದ ಟ್ರಸ್ಟ್ನಿಂದ ವಿಶೇಷವಾಗಿ ಆಹ್ವಾನಿಸಲ್ಪಟ್ಟ ದೇಶ ಮತ್ತು ವಿದೇಶಗಳಿಂದ 11,000 ಅತಿಥಿಗಳು ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.
ಕೇಂದ್ರ ಸರ್ಕಾರ ತನ್ನ ಎಲ್ಲಾ ಕಚೇರಿಗಳನ್ನು ಅರ್ಧ ದಿನ ಮುಚ್ಚುವುದಾಗಿ ಘೋಷಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.