News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಯೋಧ್ಯೆ ಪ್ರಾಣ ಪ್ರತಿಷ್ಠೆ: ಸಂಪೂರ್ಣ ರಾಮಮಯಗೊಂಡ ರಾಷ್ಟ್ರ

ಹಿಂದೂಗಳ 500 ವರ್ಷಗಳ ಸುದೀರ್ಘ ಕಾಯುವಿಕೆಗೆ ಕೊನೆಗೂ ತೆರೆಬಿದ್ದಿದೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿದ್ದು, ಪ್ರಾಣ ಪ್ರತಿಷ್ಠೆಯ ಸಂಭ್ರಮ ಮನೆ ಮಾಡಿದೆ. ಈ ನಡುವೆ ಸಂಪೂರ್ಣ ರಾಷ್ಟ್ರ ರಾಮನಾಮವನ್ನು ಜಪಿಸುತ್ತಿದ್ದು, ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮ ವಿರಾಜಮಾನನಾಗುವ ಐತಿಹಾಸಿಕ ಘಟನೆಯನ್ನು ಕಣ್ತುಂಬಿಕೊಳ್ಳಲು ಕಾತುರತೆಯಿಂದ ಕಾಯುತ್ತಿದೆ.

ಇಡೀ ಅಯೋಧ್ಯೆ ಮದುವಣಗಿತ್ತಿಯಂತೆ ಕಂಗೊಳಿಸುತ್ತಿದ್ದು, ಜನರು ಉತ್ಸಾಹ ಸಡಗರದಿಂದ ಕುಣಿದು ಕುಪ್ಪಳಿಸುತ್ತಿದ್ದಾರೆ. ರಾಮ ಭಜನೆಯನ್ನು ಉದ್ಘರಿಸುತ್ತಿದ್ದಾರೆ. ಪ್ರತಿಷ್ಠಾಪನೆಗೆ 7000 ಅತಿಥಿಗಳಿಗೆ ಆಹ್ವಾನ ನೀಡಲಾಗಿದ್ದು, ಎಲ್ಲರೂ ಈಗಾಗಲೇ ಅಯೋಧ್ಯೆಗೆ ಆಗಮಿಸುತ್ತಿದ್ದಾರೆ. ಗಣ್ಯರ ಆಗಮನದ ಹಿನ್ನೆಲೆಯಲ್ಲಿ ಭಾರೀ ಸಂಖ್ಯೆಯಲ್ಲಿ ಭದ್ರತಾ ಪಡೆಗಳನ್ನು ನಿಯೋಜನೆಗೊಳಿಸಲಾಗಿದೆ. ವಿಶೇಷ ಸಂರಕ್ಷಣಾ ಗುಂಪು (ಎಸ್ ಜಿಪಿ) ರಾಷ್ಟ್ರೀಯ ಭದ್ರತಾ ಪಡೆ, ಬ್ಲ್ಯಾಕ್ ಕ್ಯಾಟ್ ಕಮಾಂಡೋಗಳು, ಕೇಂದ್ರ ಮೀಸಲು ಪಡೆ (ಸಿಆರ್ ಪಿಎಫ್) ಕೋಬ್ರಾ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಕ್ಷಿಪ್ರ ಕ್ರಿಯಾಪಡೆ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಘಟಕಗಳನ್ನು ನಗರಾದ್ಯಂತ್ಯ ನಿಯೋಜಿಸಲಾಗಿದೆ. A1 ಚಾಲಿತ ಡ್ರೋನ್‌ಗಳು, ಎನ್ ಎಸ್ ಜಿ ಸ್ನೈಪರ್ ಗಳನ್ನು ನಿಯೋಜಿಸಲಾಗಿದೆ.

ಸಮಾರಂಭವು ಮಧ್ಯಾಹ್ನ 12:20 ಕ್ಕೆ ಪ್ರಾರಂಭವಾಗಲಿದ್ದು, ದೇವಸ್ಥಾನದ ಟ್ರಸ್ಟ್ ಪ್ರಕಾರ, ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ. ಇದರ ನಂತರ ಪ್ರಧಾನಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

“ಪ್ರಧಾನಿ ಅವರು ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ‘ಶ್ರಮಜೀವಿ’ಗಳೊಂದಿಗೆ ಸಂವಾದ ನಡೆಸಲಿದ್ದಾರೆ” ಎಂದು ರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಯ ಉಸ್ತುವಾರಿ ವಹಿಸಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯರೊಬ್ಬರು ತಿಳಿಸಿದ್ದಾರೆ.

ಪುರಾತನವಾದ ಶಿವ ದೇವಾಲಯವನ್ನು ಪುನಃಸ್ಥಾಪಿಸಲಾಗಿರುವ ಕುಬೇರ್ ತಿಲಾಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಲ್ಲಿ ‘ಪೂಜೆ’ ಮಾಡಲಿದ್ದಾರೆ’ ಎಂದು ತಿಳಿಸಿದರು.

ಭವ್ಯವಾದ ರಾಮ ಜನ್ಮಭೂಮಿ ಮಂದಿರವನ್ನು ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾಗಿದೆ. ಇದರ ಉದ್ದ (ಪೂರ್ವ-ಪಶ್ಚಿಮ) 380 ಅಡಿ; ಅಗಲ 250 ಅಡಿ ಮತ್ತು ಎತ್ತರ 161 ಅಡಿ. ಇದು ಒಟ್ಟು 392 ಕಂಬಗಳಿಂದ ಬೆಂಬಲಿತವಾಗಿದೆ ಮತ್ತು 44 ಬಾಗಿಲುಗಳನ್ನು ಹೊಂದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top