ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಿಂದ ಹಿಂದಿರುಗಿದ ನಂತರ ಹೊಸ ಯೋಜನೆಯೊಂದನ್ನು ಘೋಷಣೆ ಮಾಡಿದ್ದಾರೆ. ಜನರು ತಮ್ಮ ಮನೆಗಳಲ್ಲಿ ಸೌರ ಫಲಕಗಳನ್ನು ಸ್ಥಾಪಿಸಲು ಸಹಾಯ ಮಾಡುವ ಹೊಸ ಯೋಜನೆಯನ್ನು ಪ್ರಾರಂಭಿಸಲು ನಿರ್ಧರಿಸಿದ್ದಾಗಿ ಅವರು ಹೇಳಿದ್ದಾರೆ. ಈ ನಿರ್ಧಾರವು “ಜಗತ್ತಿನ ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಶಕ್ತಿಯನ್ನು ಪಡೆಯುತ್ತಾರೆ” ಎಂಬ ಅರಿವಿನಿಂದ ಪ್ರೇರಿತವಾಗಿದೆ ಎಂದಿದ್ದಾರೆ.
“ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಯನ್ನು 1 ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರ ಅಳವಡಿಸುವ ಗುರಿಯೊಂದಿಗೆ ಪ್ರಾರಂಭಿಸಲಿದೆ” ಎಂದು ಪ್ರಧಾನಿ ಮೋದಿ X ಪೋಸ್ಟ್ ಮಾಡಿದ್ದಾರೆ.
“ಇದು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ” ಎಂದು ಅವರು ಹೇಳಿದರು.
ಅಯೋಧ್ಯೆಯಲ್ಲಿ ನಡೆದ ಪ್ರಾಣ ಪ್ರತಿಷ್ಠೆಯ ನೇತೃತ್ವ ವಹಿಸಿದ್ದ ಪ್ರಧಾನಿ ಮೋದಿ, ತಮ್ಮ ಭಾಷಣದಲ್ಲಿ ಶ್ರೀರಾಮನು “ಶಕ್ತಿ” ಮತ್ತು “ಹೊಸ ಯುಗದ ಉದಯ” ಎಂದು ಹೇಳಿದರು.
“ರಾಮನು ಬೆಂಕಿಯಲ್ಲ, ಅವನು ಶಕ್ತಿ. ರಾಮನು ವಿವಾದವಲ್ಲ, ಅವನು ಪರಿಹಾರ. ರಾಮನು ಕೇವಲ ನಮ್ಮವನಲ್ಲ, ಅವನು ಎಲ್ಲರಿಗೂ ಸೇರಿದವನು” ಎಂದು ಪ್ರಧಾನಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.