ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಜನರನ್ನು ಪ್ರಚೋದಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಇಂದು ನಿರ್ದೇಶನ ನೀಡಿದ್ದಾರೆ. ಭಾರತ್ ಜೋಡೋ ನ್ಯಾಯ ಯಾತ್ರೆ ಇಂದು 10 ನೇ ದಿನಕ್ಕೆ ಕಾಲಿಟ್ಟಿದೆ.
ಎಕ್ಸ್ ಪೋಸ್ಟ್ ಮಾಡಿರುವ ಶರ್ಮಾ, ”ಇವು ಅಸ್ಸಾಮಿ ಸಂಸ್ಕೃತಿಯ ಭಾಗವಲ್ಲ. ನಮ್ಮದು ಶಾಂತಿಯುತ ರಾಜ್ಯ. ಇಂತಹ “ನಕ್ಸಲೀಯ ತಂತ್ರಗಳು” ನಮ್ಮ ಸಂಸ್ಕೃತಿಗೆ ಸಂಪೂರ್ಣವಾಗಿ ಪರಕೀಯವಾಗಿವೆ. ಜನಸಂದಣಿಯನ್ನು ಪ್ರಚೋದಿಸಿದ್ದಕ್ಕಾಗಿ ಮತ್ತು ನಿಮ್ಮ ಹ್ಯಾಂಡಲ್ಗಳಲ್ಲಿ ನೀವು ಪೋಸ್ಟ್ ಮಾಡಿದ ದೃಶ್ಯಗಳನ್ನು ಸಾಕ್ಷಿಯಾಗಿ ಬಳಸಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣವನ್ನು ದಾಖಲಿಸಲು ನಾನು ಅಸ್ಸಾಂ ಜಿಡಿಪಿಗೆ ಸೂಚನೆ ನೀಡಿದ್ದೇನೆ. ನಿಮ್ಮ ಅಶಿಸ್ತಿನ ನಡವಳಿಕೆ ಮತ್ತು ಒಪ್ಪಿಗೆ ಸೂಚಿಸಿದ ಮಾರ್ಗಸೂಚಿಗಳ ಉಲ್ಲಂಘನೆಯಿಂದಾಗಿ ಈಗ ಗುವಾಹಟಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ” ಎಂದಿದ್ದಾರೆ.
ಭಾರತ್ ಜೋಡೋ ನ್ಯಾಯ್ ಯಾತ್ರೆ ಗುವಾಹಟಿಗೆ ಪ್ರವೇಶಿಸದಂತೆ ತಡೆಯುವಾಗ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಸ್ಸಾಂ ಪೊಲೀಸರ ನಡುವೆ ನಡೆದ ಘರ್ಷಣೆಯನ್ನು ಅನುಸರಿಸಿ ಈ ಆದೇಶ ಹೊರಡಿಸಲಾಗಿದೆ. ಯಾತ್ರೆಯು ಅಸ್ಸಾಂನಿಂದ ಪುನರಾರಂಭಗೊಂಡಂತೆ, ಗುವಾಹಟಿಗೆ ಯಾತ್ರೆಯ ಪ್ರವೇಶ ಬಿಂದುವಾದ ಖಾನಪರಾ ಪ್ರದೇಶದಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಯಿತು.
These are not part of Assamese culture. We are a peaceful state. Such “naxalite tactics” are completely alien to our culture.
I have instructed @DGPAssamPolice to register a case against your leader @RahulGandhi for provoking the crowd & use the footage you have posted on your… https://t.co/G84Qhjpd8h— Himanta Biswa Sarma (@himantabiswa) January 23, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.