ನವದೆಹಲಿ: ಪ್ರಜಾಪ್ರಭುತ್ವದ ವೈವಿಧ್ಯತೆಯಲ್ಲಿ ಭಾರತದ ಚುನಾವಣಾ ಆಯೋಗವು ಪ್ರಮುಖ ಪಾತ್ರ ವಹಿಸುತ್ತದೆ. ಮತದಾರರಲ್ಲಿ ಜಾಗೃತಿ ಮೂಡಿಸುವಲ್ಲಿ ಆಯೋಗ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
ಇಂದು ನವದೆಹಲಿಯಲ್ಲಿ ನಡೆದ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಈ ವರ್ಷ ದೇಶಾದ್ಯಂತ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ಬಾರಿಯ ಚುನಾವಣೆಯಲ್ಲಿ ದೇಶದಲ್ಲಿ 12 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ದೇಶದಲ್ಲಿ 96 ಕೋಟಿಗೂ ಅಧಿಕ ಮತದಾರರಿದ್ದು, ಮತದಾರರೊಂದಿಗೆ ಸಂಪರ್ಕ ಸಾಧಿಸಲು ಚುನಾವಣಾ ಆಯೋಗ ಪ್ರತಿ ಹೆಜ್ಜೆಯನ್ನೂ ಇಡುತ್ತಿದೆ. ಚುನಾವಣಾ ಸಮಯದಲ್ಲಿ ತಂತ್ರಜ್ಞಾನದ ಪಾತ್ರವನ್ನು ಚುನಾವಣಾ ಆಯೋಗವು ಹೆಚ್ಚಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣಾ ಆಯೋಗವು ಇಂದು 14 ನೇ ರಾಷ್ಟ್ರೀಯ ಮತದಾರರ ದಿನವನ್ನು ‘ಮತದಾನದಂತೆ ಮತ್ಯಾವುದೂ ಇಲ್ಲ, ನಾನು ಖಚಿತವಾಗಿ ಮತ ಚಲಾಯಿಸುತ್ತೇನೆ’ ಎಂಬ ಥೀಮ್ನೊಂದಿಗೆ ಆಚರಿಸುತ್ತಿದೆ.
ಮುರ್ಮು 2023ನೇ ಸಾಲಿನ ಅತ್ಯುತ್ತಮ ಚುನಾವಣಾ ಅಭ್ಯಾಸಗಳ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. 2023ರ ಅವಧಿಯಲ್ಲಿ ಚುನಾವಣಾ ನಿರ್ವಹಣೆಯಲ್ಲಿ ಐಟಿ ಉಪಕ್ರಮಗಳು, ಭದ್ರತಾ ನಿರ್ವಹಣೆ, ಚುನಾವಣಾ ನಿರ್ವಹಣೆ, ಮತದಾರರ ಪಟ್ಟಿ, ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ರಾಜ್ಯ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಮತದಾರರ ಜಾಗೃತಿಗಾಗಿ ತಮ್ಮ ಅಮೂಲ್ಯ ಕೊಡುಗೆ ನೀಡಿದ ಸರ್ಕಾರಿ ಇಲಾಖೆಗಳು ಮತ್ತು ಮಾಧ್ಯಮ ಸಂಸ್ಥೆಗಳು ಸೇರಿದಂತೆ ಪ್ರಮುಖ ಪಾಲುದಾರರಿಗೆ ಪ್ರಶಸ್ತಿಗಳನ್ನು ನೀಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.