ತಿರುವನಂತಪುರಂ: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಭಾರತ ಸರ್ಕಾರದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ತನ್ನ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
ಹೈಕೋರ್ಟ್ ಸಭಾಂಗಣದಲ್ಲಿ ನಾಟಕವೊಂದು ಪ್ರದರ್ಶನಗೊಂಡಿದ್ದು, ನಾಟಕದಲ್ಲಿ ಅವಹೇಳನಕಾರಿಯಾಗಿದ್ದ ಅಂಶಗಳ ಕುರಿತು ಬಿಜೆಪಿ ಕಾನೂನು ಘಟಕ ಮುಖ್ಯ ನ್ಯಾಯಮೂರ್ತಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.
ಮುಖ್ಯ ನ್ಯಾಯಾಧೀಶರ ನಿರ್ದೇಶನದ ಮೇರೆಗೆ ಹೈಕೋರ್ಟ್ ರಿಜಿಸ್ಟ್ರಾರ್-ಜನರಲ್ ಪಿ ಕೃಷ್ಣ ಕುಮಾರ್ ಅಮಾನತುಗೊಳಿಸಿರುವ ಇಬ್ಬರು ಅಧಿಕಾರಿಗಳೆಂದರೆ ನ್ಯಾಯಾಲಯದ ಸಹಾಯಕ ರಿಜಿಸ್ಟ್ರಾರ್ ಸುಧೀಶ್ ಟಿಎ ಮತ್ತು ಕೋರ್ಟ್ ಕೀಪರ್ (ಉನ್ನತ ದರ್ಜೆ) ಸುಧೀಶ್ ಪಿಎಂ ಎಂದು ತಿಳಿದುಬಂದಿದೆ.
ಮುಖ್ಯ ನ್ಯಾಯಮೂರ್ತಿ ಆಶಿಶ್ ಜಿತೇಂದ್ರ ದೇಸಾಯಿ ಅವರು ಘಟನೆಯ ಬಗ್ಗೆ ತನಿಖೆ ನಡೆಸುವಂತೆ ರಿಜಿಸ್ಟ್ರಾರ್ (ವಿಜಿಲೆನ್ಸ್) ಗೆ ಸೂಚಿಸಿದರು ಮತ್ತು ರಿಜಿಸ್ಟ್ರಾರ್ (ಆಡಳಿತ) ಅವರಿಂದ ವಿವರಣೆ ಕೇಳಿದರು.
ವರದಿಗಳ ಪ್ರಕಾರ, ಈ ನಾಟಕವು ಸರ್ಕಾರದ ಪ್ರಮುಖ ಉಪಕ್ರಮಗಳಾದ ಜಲ ಜೀವನ್ ಮಿಷನ್ ಮತ್ತು ಭಾರತ್ ಕಿ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಅವಮಾನಿಸಿದೆ ಎಂದು ಆರೋಪಿಸಲಾಗಿದೆ.
“2024 ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಹೈಕೋರ್ಟ್ ಸಭಾಂಗಣದಲ್ಲಿ ಪ್ರದರ್ಶಿಸಲಾದ ವೇದಿಕೆ ಕಾರ್ಯಕ್ರಮದಲ್ಲಿ ಸರ್ಕಾರದ ವಿರುದ್ಧ ಅವಹೇಳನಕಾರಿ ವಿಷಯ ಮತ್ತು ಟೀಕೆ ಕಾಣಿಸಿಕೊಂಡಿದೆ” ಎಂದು ನ್ಯಾಯಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.