ನವದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯಾಗಿದ್ದು, ರಾಷ್ಟ್ರ ಅವರನ್ನು ಸ್ಮರಿಸುತ್ತಿದೆ. ಈ ದಿನವನ್ನು ಹುತಾತ್ಮರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ.
1948 ರ ಜನವರಿ 30ರಂದು ನಾಥುರಾಮ್ ವಿನಾಯಕ್ ಗೋಡ್ಸೆಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹತ್ಯೆಯಾಯಿತು. ಬ್ರಿಟಿಷರ ಆಳ್ವಿಕೆಯಿಂದ ದೇಶವು ಸ್ವಾತಂತ್ರ್ಯ ಪಡೆದ ಕೇವಲ ಐಐದು ತಿಂಗಳು 15 ದಿನಗಳ ಬಳಿಕ ಗಾಂಧೀಜಿಯವರ ಹತ್ಯೆಯಾಗಿತ್ತು.
ಮಹಾತ್ಮ ಗಾಂಧೀಜಿಯವರ 76ನೇ ಪುಣ್ಯತಿಥಿಯಂದು ಗಣ್ಯಾತಿಗಣ್ಯರು ಬಾಪುವಿಗೆ ಗೌರವ ನಮನಗಳನ್ನು ಸಲ್ಲಿಸುತ್ತಿದ್ದಾರೆ.
“ಪೂಜ್ಯ ಬಾಪು ಅವರ ಪುಣ್ಯ ತಿಥಿಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ನಮ್ಮ ದೇಶಕ್ಕಾಗಿ ಹುತಾತ್ಮರಾದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗಗಳು ಜನರಿಗೆ ಸೇವೆ ಸಲ್ಲಿಸಲು ಮತ್ತು ನಮ್ಮ ರಾಷ್ಟ್ರಕ್ಕಾಗಿ ಅವರ ದೃಷ್ಟಿಕೋನವನ್ನು ಪೂರೈಸಲು ನಮಗೆ ಸ್ಫೂರ್ತಿ ನೀಡುತ್ತವೆ” ಎಂದಿದ್ದಾರೆ.
I pay homage to Pujya Bapu on his Punya Tithi. I also pay homage to all those who have been martyred for our nation. Their sacrifices inspire us to serve the people and fulfil their vision for our nation.
— Narendra Modi (@narendramodi) January 30, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.