ನವದೆಹಲಿ: ಕಳೆದ 5 ವರ್ಷಗಳಲ್ಲಿ ದೇಶದ ಸುಧಾರಣೆ, ಕಾರ್ಯಕ್ಷಮತೆ ಹಾಗೂ ಪರಿವರ್ತನೆಗಾಗಿ ನಾವು ಶ್ರಮಿಸಿದ್ದೇವೆ. ಕೋವಿಡ್ ಸಂಕಷ್ಟದ ಸಮಯವನ್ನೂ ನಾವು ಯಶಸ್ವಿಯಾಗಿ ನಿಭಾಯಿಸಿದ್ದೇವೆ. 17 ನೇ ಲೋಕಸಭೆಯ ಐದು ವರ್ಷಗಳಲ್ಲಿ ದೇಶಕ್ಕಾಗಿ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
17ನೇ ಲೋಕಸಭೆಯ ಕೊನೆಯ ಅಧಿವೇಶನವನ್ನು ಇಂದು ಉದ್ದೇಶಿಸಿ ಮಾತನಾಡಿದ ಅವರು, ಹೊಸ ಸಂಸತ್ ಭವನ ನಿರ್ಮಾಣ ಮಹತ್ವದ ಹೆಜ್ಜೆಯಾಗಿದೆ. ಸೆಂಗೋಲ್ ಸಂಪ್ರದಾಯ ಸ್ಥಾಪನೆ ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ. ಈ ಬಾರಿ ಜಿ-20 ಶೃಂಗಸಭೆಯ ಆತಿಥ್ಯ ಭಾರತಕ್ಕೆ ಸಿಕ್ಕಿತ್ತು. ಆತಿಥೇಯ ರಾಷ್ಟ್ರವಾಗಿ ಭಾರತ ಅತ್ಯುತ್ತಮವಾಗಿ ಕೆಲಸ ಮಾಡಿದೆ ಎಂದರು.
ಭಾರತ ಪ್ರಜಾಪ್ರಭುತ್ವದ ತಾಯಿ ಎನ್ನುವುದನ್ನು ನೀವು ಜಗತ್ತಿಗೆ ತೋರಿಸಿದ್ದೀರಿ. ಲೋಕಸಭೆಗೆ ಪ್ರತಿಯೊಬ್ಬರೂ ಕೊಡುಗೆ ನೀಡಿದ್ದಾರೆ. ಎಲ್ಲಾ ಸದಸ್ಯರಿಗೂ ನನ್ನ ಅಭಿನಂದನೆಗಳು. 18 ನೇ ಲೋಕಸಭೆಯಲ್ಲೂ ಜನರು ಆಶೀರ್ವದಿಸುವ ನಿರೀಕ್ಷೆ ಇದೆ ಎಂದರು.
ಈ ಸದನವು ನಾವೀನ್ಯತೆಯನ್ನು ಉತ್ತೇಜಿಸಲು ಕಾನೂನು ಚೌಕಟ್ಟನ್ನು ರಚಿಸಿದೆ. ಅದಕ್ಕಾಗಿ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ ಆರಂಭಿಸಲಾಗಿದೆ. ಈ ಕಾರಣದಿಂದಾಗಿ, ನಮ್ಮ ದೇಶವು ಸಂಶೋಧನೆ ಮತ್ತು ನಾವೀನ್ಯತೆ ಕಾರ್ಯಗಳಿಗೆ ಜಾಗತಿಕ ಕೇಂದ್ರವಾಗಲಿದೆ ಎಂದರು.
21ನೇ ಶತಮಾನದ ಭಾರತಕ್ಕೆ ಅಡಿಪಾಯ ಹಾಕುವಂತಹ ಹಲವು ಸುಧಾರಣೆಗಳು ಅನುಷ್ಠಾನಗೊಂಡವು, ಭಾರತವು ಅಭೂತಪೂರ್ವ ವೇಗದಲ್ಲಿ ಮುಂದಕ್ಕೆ ದಾಪುಗಾಲಿಡುತ್ತಿದೆ ಹಿಂದಿನ ತಲೆಮಾರುಗಳು ಸುದೀರ್ಘ ಅವಧಿಯಿಂದ ಕಾಯುತ್ತಿದ್ದ ಬದಲಾವಣೆಗಳು 17ನೇ ಲೋಕಸಭೆಯಲ್ಲಿ ಸಾಕಾರಗೊಂಡಿದೆ ಎಂಬುದನ್ನು ನಾನು ಆತ್ಮತೃಪ್ತಿಯೊಂದಿಗೆ ಹೇಳಬಲ್ಲೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.