ನವದೆಹಲಿ: 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ದೇಶದ ಮೂಲೆ ಮೂಲೆಗಳಿಂದ ನಾಗರಿಕರು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.
“ನಾನು ಪುಲ್ವಾಮಾದಲ್ಲಿ ಹುತಾತ್ಮರಾದ ವೀರ ವೀರರಿಗೆ ಗೌರವ ಸಲ್ಲಿಸುತ್ತೇನೆ. ಅವರ ಸೇವೆ ಮತ್ತು ನಮ್ಮ ದೇಶಕ್ಕಾಗಿ ಅವರು ಮಾಡಿದ ತ್ಯಾಗವನ್ನು ಸದಾ ಸ್ಮರಿಸಲಾಗುವುದು” ಎಂದು ಪುಲ್ವಾಮಾ ದಾಳಿಯ ಐದನೇ ವಾರ್ಷಿಕೋತ್ಸವದ ಸಂಧರ್ಭವಾದ ಇಂದು ಮೋದಿ ಹೇಳಿದರು,.
ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರ ಜಿಲ್ಲೆಯಲ್ಲಿ ನಡೆದ ದಾಳಿಯಲ್ಲಿ 40 ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಪ್ರಾಣ ಕಳೆದುಕೊಂಡರು. ಪಾಕಿಸ್ತಾನ-ಸಂಬಂಧಿತ ಭಯೋತ್ಪಾದಕರು ಸ್ಫೋಟಕ ತುಂಬಿದ ವಾಹನವನ್ನು ಬೆಂಗಾವಲು ಪಡೆಗೆ ಡಿಕ್ಕಿ ಹೊಡೆದ ಪರಿಣಾಮ ಘೋರ ದುರಂತ ಸಂಭವಿಸಿತ್ತು.
ಜೈಶ್-ಎ-ಮೊಹಮ್ಮದ್ ಆತ್ಮಾಹುತಿ ಬಾಂಬರ್ ಈ ದಾಳಿಯನ್ನು ನಡೆಸಿದ್ದು, 100 ಕೆಜಿಗೂ ಹೆಚ್ಚು ಸ್ಫೋಟಕಗಳನ್ನು ಸಾಗಿಸುತ್ತಿದ್ದ ವಾಹನವನ್ನು ಬೆಂಗಾವಲುಪಡೆಗೆ ಡಿಕ್ಕಿ ಹೊಡೆದಿದ್ದಾನೆ. ದಾಳಿಯಲ್ಲಿ ಹಲವು ಸಿಆರ್ಪಿಎಫ್ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿತ್ತು. ಆತ್ಮಾಹುತಿ ದಾಳಿಕೋರನನ್ನು ಪುಲ್ವಾಮಾದ ಕಾಕಪೋರಾ ಗ್ರಾಮದ ‘ಗುಂಡಿಬಾಗ್ನ ವಕಾಸ್ ಕಮಾಂಡೋ’ ಎಂದೂ ಕರೆಯಲ್ಪಡುವ ಆದಿಲ್ ಅಹ್ಮದ್ ಎಂದು ಪೊಲೀಸರು ಗುರುತಿಸಿದ್ದಾರೆ.
ಈ ಭಯೋತ್ಪಾದಕ ದಾಳಿಯು ಭಾರತ ಪ್ರತೀಕಾರ ತೀರಿಸುವಂತೆ ಮಾಡಿತ್ತು, ಭಾರತೀಯ ವಾಯುಪಡೆ (ಐಎಎಫ್) ಪಾಕಿಸ್ತಾನದ ಬಾಲಾಕೋಟ್ನಲ್ಲಿರುವ ಶಂಕಿತ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿ ಕಾರ್ಯಾಚರಣೆಯನ್ನು ನಡೆಸಿ ಅನೇಕ ಭಯೋತ್ಪಾದಕ ಶಿಬಿರಗಳನ್ನು ಧ್ವಂಸ ಮಾಡಿತ್ತು.
I pay homage to the brave heroes who were martyred in Pulwama. Their service and sacrifice for our nation will always be remembered.
— Narendra Modi (@narendramodi) February 14, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.