ಬೆಂಗಳೂರು: ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯ ಸಂದೇಶಖಾಲಿ ಹಳ್ಳಿಯ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಇದನ್ನು ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾದ ಕು. ಸಿ. ಮಂಜುಳಾ ಅವರು ಖಂಡಿಸಿದ್ದಾರೆ. ಅತ್ಯಾಚಾರ ಮತ್ತು ದೌರ್ಜನ್ಯ ಸೇರಿ ಸಮಗ್ರ ವಿಷಯದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಪಶ್ಚಿಮಬಂಗಾಳದ ಮುಖ್ಯಮಂತ್ರಿಯಾದ ಮಮತಾ ಬ್ಯಾನರ್ಜಿ ಮೊದಲಿನಿಂದಲೂ ಹಿಂದೂಗಳ ಮಾರಣಹೋಮ ನಡೆಸುವುದರಲ್ಲಿ ಚಿರಪರಿಚಿತ ನಾಯಕಿ. ಸಂದೇಶಖಾಲಿ ಹಳ್ಳಿಯಲ್ಲಿ ಕಳೆದ ಒಂದು ವಾರದಿಂದ ತಲ್ಲಣ ಸೃಷ್ಟಿಯಾಗಿದೆ. ಈ ಹಳ್ಳಿಯಲ್ಲಿ ಟಿಎಂಸಿ ಪಕ್ಷದ ಮುಸಲ್ಮಾನ ನಾಯಕ ಶೇಖ್ ಷಹಜಹಾನ್ ಅನುಚರರು ಅವರ ಹಳ್ಳಿಗೆ ನುಗ್ಗಿ, ಮನೆಮನೆಯೊಳಗೆ ನುಗ್ಗಿ ಹಿಂದೂ ಮಹಿಳೆಯರನ್ನು ಎಳೆದುಕೊಂಡು ಹೋಗಿ ಅಲ್ಲಿನ ಟಿಎಂಸಿ ಪಕ್ಷದ ಕಚೇರಿಯಲ್ಲಿ ಅತ್ಯಾಚಾರವೆಸಗಿ ನಿರಂತರವಾಗಿ ಬಲಾತ್ಕಾರ ಮಾಡುತ್ತಿದ್ದಾರೆ ಎಂದು ವಿವರಿಸಿದ್ದಾರೆ.
ಅಲ್ಲಿನ ಅಧಿಕಾರಿಯೊಬ್ಬರ ಸಮ್ಮುಖದಲ್ಲೇ ಇಷ್ಟೆಲ್ಲಾ ನಡೆಯುತ್ತಿದ್ದು, ಆ ಹಿಂದೂ ಮಹಿಳೆಯರ ಗಂಡಂದಿರಿಗೆ ಇನ್ನು ಮುಂದೆ ಅವರು ಕೇವಲ ಹೆಸರಿಗೆ ಮಾತ್ರ ಅವರ ಪತಿಯಾಗಿದ್ದು ಇನ್ನು ಮುಂದೆ ಅವರು ಮತ್ತು ಅವರ ಮೇಲಿನ ಸಂಪೂರ್ಣ ಹಕ್ಕು, ಅಧಿಕಾರ ಅವರ ಪತಿಗೆ ಇರುವುದಿಲ್ಲ ಎಂದು ಧಮ್ಕಿ ಹಾಕಿ ಹೆದರಿಸಲಾಗಿದೆ ಎಂದಿದ್ದಾರೆ.
ಈ ದುರ್ಘಟನೆಯ ಕುರಿತು ಸಂದೇಶಖಾಲಿ ಹಳ್ಳಿಯ ಹಿಂದೂ ದಲಿತ ಮಹಿಳೆಯರು ಬೀದಿಗಿಳಿದು ಲಾಠಿ ಹಿಡಿದು ಪ್ರತಿಭಟನೆ ಮಾಡುತ್ತಿದ್ದರೂ ಅಲ್ಲಿನ ಪೊಲೀಸರು ಟಿಎಂಸಿ ನಾಯಕ ಶೇಖ್ ಷಹಜಹಾನ್ ವಿರುದ್ಧ ಯಾವುದೇ ಕಾನೂನು ಕ್ರಮ ತೆಗೆದುಕೊಂಡಿಲ್ಲ. ಅವನು ತಲೆಮರೆಸಿಕೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.
ಯಾವ ಮಹಿಳೆ ಬಗ್ಗೆ ಅಂತಃಕರಣ ಇರಬೇಕೋ, ರಕ್ಷಣೆ ಕೊಡುವ ಜವಾಬ್ದಾರಿ ಇರುವಂತಹ ಒಬ್ಬ ಮುಖ್ಯಮಂತ್ರಿಯೇ ಮಹಿಳೆಯರ ಮೇಲಿನ ಅತ್ಯಾಚಾರವನ್ನು ನೊಡುತ್ತಾ, ಅತ್ಯಾಚಾರಿಗಳಿಗೆ ರಕ್ಷಣೆ ಕೊಡುತ್ತಿದ್ದಾರೆ ಎಂಬುದು ಅತ್ಯಂತ ಆತಂಕಕಾರಿ ವಿಚಾರ ಮತ್ತು ಖಂಡನಾರ್ಹ ಕೂಡ ಆಗಿದೆ ಎಂದು ಕು. ಸಿ. ಮಂಜುಳಾ ಅವರು ತಿಳಿಸಿದ್ದಾರೆ. ಸುಪ್ರೀಂಕೋರ್ಟ್, ಮಹಿಳಾ ರಕ್ಷಣೆಗಾಗಿ ತಕ್ಷಣವೇ ಮಧ್ಯ ಪ್ರವೇಶ ಮಾಡಬೇಕೆಂದು ಅವರು ವಿನಂತಿಸಿದ್ದಾರೆ.
ಅಲ್ಲಿನ ಮಹಿಳೆಯರಿಗೆ ನ್ಯಾಯ ಸಿಗಬೇಕು. ಟಿಎಂಸಿಯ ರೌಡಿ ಶೇಖ್ ಷಹಜಹಾನ್ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಅವನು ಆ ಹಿಂದೂ ಮಹಿಳೆಯರ ಕೃಷಿಭೂಮಿಯನ್ನು ಅನೈತಿಕವಾಗಿ ಕಸಿದುಕೊಂಡಿರುವುದನ್ನು ಈ ಕೂಡಲೇ ಹಿಂದಿರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಶೇಖ್ ಷಹಜಹಾನ್, ಆ ಹಳ್ಳಿಯ ಹಿಂದೂ, ಪರಿಶಿಷ್ಟ ಜಾತಿ, ಪಂಗಡದ ಹಾಗೂ ಮೀನುಗಾರರ ದಲಿತ ಮಹಿಳೆಯರಿಗೆ ಸೇರಿದ ಕೃಷಿ ಭೂಮಿಯನ್ನು ಕಾನೂನು ಬಾಹಿರವಾಗಿ, ನಕಲಿ ದಾಖಲೆ ಸೃಷ್ಟಿಸಿ, ವಶದಲ್ಲಿ ಇಟ್ಟುಕೊಂಡಿದ್ದಾನೆ. ಇದೇ ಶೇಖ್ ಶಹಜಹಾನ್ ಜನವರಿ ತಿಂಗಳಲ್ಲಿ ಪಶ್ಚಿಮ ಬಂಗಾಳಕ್ಕೆ ಇ.ಡಿ. ಅಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಅವರ ಮೇಲೆ ದಾಳಿ ಮಾಡಿ ಕೊಲ್ಲಲು ಸಂಚು ರೂಪಿಸಿರುತ್ತಾನೆ. ಇದಾದ ನಂತರ ಅವನು ತಲೆಮರೆಸಿಕೊಂಡಿದ್ದಾನೆ. ಅವನಿಗೆ ರಕ್ಷಣೆ ನೀಡುತ್ತಿರುವುದು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಸರ್ಕಾರ ಎಂದು ಆಕ್ಷೇಪಿಸಿದ್ದಾರೆ.
ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವನನ್ನು ರಕ್ಷಿಸುತ್ತಿದ್ದಾರೆ. ಇದು ಖಂಡನೀಯ. ಆಕೆ ಒಬ್ಬ ಹೆಣ್ಣಾಗಿ ತನ್ನದೇ ರಾಜ್ಯದ ಮಹಿಳೆಯರಿಗೆ ಈ ರೀತಿ ಅನ್ಯಾಯ ನಡೆಯುತ್ತಿದ್ದರೂ ಯಾವುದೇ ಕಾನೂನು ಕ್ರಮ ಜರುಗಿಸದೇ, ಆ ರೌಡಿ ನಾಯಕನಿಗೆ ರಕ್ಷಣೆ ಕೊಡುತ್ತಿರುವುದು ಅತ್ಯಂತ ಖಂಡನೀಯ ಹಾಗೂ ಪ್ರಜಾಪ್ರಭುತ್ವದ ದೌರ್ಭಾಗ್ಯವಾಗಿದೆ. ಇದು ಅತ್ಯಂತ ದುರದೃಷ್ಟಕರ. ಕಳೆದ ವಾರದಿಂದ ಆ ಹಳ್ಳಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಇಷ್ಟಾದರೂ ಮಮತಾ ಬ್ಯಾನರ್ಜಿ ಅಲ್ಲಿಗೆ ಭೇಟಿ ನೀಡಿಲ್ಲ, ಹಿಂದೂ ಮಹಿಳೆಯರನ್ನು ಮಾತನಾಡಿಲ್ಲ ಎಂದು ಮಂಜುಳಾ ಅವರು ಆಕ್ಷೇಪಿಸಿದ್ದಾರೆ.
ಇಂಥ ಅತ್ಯಾಚಾರಿ, ಅನಾಚಾರಿಗಳನ್ನು ರಕ್ಷಿಸುತ್ತಿರುವ ಬಂಗಾಳದ ಮಹಿಳಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ನಡೆ ಮತ್ತು ಆಡಳಿತವೈಖರಿಯನ್ನು ತೀವ್ರವಾಗಿ ಖಂಡಿಸುವುದಾಗಿ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.