ನವದೆಹಲಿ: ಕೃಷಿಗೆ ಸಂಬಂಧಿಸಿದ ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಸರ್ಕಾರದ ವಿರುದ್ಧ ರೈತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಈ ಪ್ರತಿಭಟನೆ ನಡುವೆ ಕೆಲವೊಂದು ಸಮಾಜ ಘಾತುಕ ಶಕ್ತಿಗಳು ಸೇರಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ಪ್ರಧಾನಿ ಮೋದಿ ಜನಪ್ರಿಯತೆಯನ್ನು ಕೆಳಗಿಳಿಸಬೇಕು ಎಂದು ಪ್ರತಿಭಟನಾ ನಿರತ ರೈತನೊಬ್ಬ ನೀಡಿದ ಹೇಳಿಕೆ ಈ ಅನುಮಾನವನ್ನು ಹೆಚ್ಚಳಗೊಳಿಸಿದೆ.
ಕೃಷಿಗೆ ಸಂಬಂಧಿಸಿದ ಹೇಳಿಕೆ ನೀಡುವುದನ್ನು ಬಿಟ್ಟು ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಟುವಾದ ರಾಜಕೀಯ ಪ್ರೇರಿತ ವಾಗ್ದಾಳಿ ನಡೆಸಿದ್ದಾರೆ. “ಮೋದಿಯವರ ಜನಪ್ರಿಯತೆ ಉತ್ತುಂಗದಲ್ಲಿದೆ, ರಾಮಮಂದಿರದಿಂದಾಗಿ ಅವರ ಗ್ರಾಫ್ ಹೆಚ್ಚಾಗಿದೆ. ನಮಗೆ ಕಡಿಮೆ ಸಮಯವಿದೆ. ನಾವು ಮೋದಿಯ ಗ್ರಾಫ್ ಅನ್ನು ಕೆಳಗೆ ತರಬೇಕಾಗಿದೆ” ಎಂದು ದಲ್ಲೆವಾಲ್ ಹೇಳಿದ್ದಾರೆ.
ಈ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, “ಇಂತಹ ಕಾಮೆಂಟ್ ಮಾಡುವುದು ಸೂಕ್ತವಲ್ಲ. ಅವರು ಎಲ್ಲಿಂದಲೋ ಬೆಂಬಲ ಪಡೆಯುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಪಂಜಾಬ್ ಸರ್ಕಾರ ಅವರನ್ನು ತಡೆಯಬಹುದಿತ್ತು, ಆದರೆ ಅವರು ಮಾಡಲಿಲ್ಲ” ಎಂದಿದ್ದಾರೆ.
"The popularity of Modi is at it's peak, His graph has gone up because of Ram Mandir. We have less time (2024 LS Elections). We have to bring graph of Modi down" – Farmer leader Jagjit Singh Dallewal exposes the political agenda behind #FarmerProtest2024 pic.twitter.com/SPwlsy9Ba3
— Megh Updates 🚨™ (@MeghUpdates) February 15, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.